ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಸುರೇಶ್ ಬಲ್ಲಾಳ್ ಅವರು ಮಂಗಳೂರಿನ ಉರ್ವಾಸ್ಟೋರ್ ನಲ್ಲಿರುವ ಮೂಡಾ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇರಳಕಟ್ಟೆ ಹಾಗೂ ಚೇಳಾರ್ ಪದವು ಹೊಸ ಬಡಾವಣೆ ನಿರ್ಮಾಣಕ್ಕೆ ಜಾಗದ ಸಮಸ್ಯೆಯನ್ನು ಇತ್ಯರ್ಥಪಡಿಸಿ ಬಡಾವಣೆ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸಲಾಗುವುದು.
ಇನ್ನೂ ಬಹುಮಹಡೀಯ ಕಟ್ಟಡದಲ್ಲಿ ಪಾರ್ಕ್ ಸಮಸ್ಯೆಗೆ ಸಂಬಂಧಿಸಿದಂತೆ ಶಾಸಕ ಜೆ.ಆರ್. ಲೋಬೋ ಅವರ ನೇತೃತ್ವದಲ್ಲಿ ನಾಳೆ ಸಭೆ ನಡೆಯಲಿದೆ.ಅದು ಕೂಡ ಸಮಸ್ಯೆ ಪರಿಹಾರ ಕಾಣಲು ಸಾಧ್ಯವಿದೆ ಎಂದು ಹೇಳಿದರು. ಶಾಸಕ ಜೆ.ಆರ್ ಲೋಬೋ ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಶುಭ ಕೋರಿದರು.ಈ ವೇಳೆ ಕಾಂಗ್ರೆಸ್ ನ ಹಲವು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.