Friday 26th, April 2024
canara news

ಪಂಚತೀರ್ಥ-ಸಪ್ತಕ್ಷೇತ್ರ ರಥಯಾತ್ರೆ ನಡೆಸಲು ಬಿಜೆಪಿಗೆ ನೈತಿಕತೆಯಿಲ್ಲ;ಐವನ್ ಡಿಸೋಜಾ

Published On : 11 Dec 2016   |  Reported By : Canaranews Network


ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ, ಪಂಚತೀರ್ಥ ಸಪ್ತಕ್ಷೇತ್ರ ರಥಯಾತ್ರೆ ನಡೆಸಲು ಬಿಜೆಪಿಯವರಿಗೆ ನೈತಿಕತೆಯಿಲ್ಲ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದರು.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಯೋಜನೆ ಬಗ್ಗೆ ಸದನದಲ್ಲಿ ವಿಧಾನಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್, ಕೋಟಾ ಶ್ರೀನಿವಾಸ್ ಪೂಜಾರಿ ವ್ಯಕ್ತಪಡಿಸಿದ್ದಾರೆ. ಆದರೆ, ಬಿಜೆಪಿಯ ಬೇರೆ ಯಾರು ಕೂಡ ವಿರೋಧ ವ್ಯಕ್ತಪಡಿಸಿಲ್ಲ. ನಾನು ಈಗಾಗಲೇ ಸದನಲ್ಲಿ ಪ್ರಸ್ತಾವನೆ ಮಾಡಿದ್ದೇನೆ.

ಈ ಕುರಿತು ಕರಾವಳಿ ಭಾಗದ ಜನರೊಂದಿಗೆ ಸಾಧಕ-ಬಾಧಕ ಚರ್ಚೆ ನಡೆಸುವಂತೆ ನೀರಾವರಿ ಸಚಿವರ ಜೊತೆ ಮಾತುಕತೆ ನಡೆಸುತ್ತೇನೆ. ಡಿಸೆಂಬರ್ ಅಂತ್ಯದೊಳಗೆ ಈ ಭಾಗದ ಜನರೊಂದಿಗೆ ಸಭೆಯನ್ನು ಮಾಡಬೇಕೆಂಬುದನ್ನು ನನ್ನ ಆಶಯವಾಗಿದೆ ಎಂದು ಐವನ್ ಡಿಸೋಜಾ ಹೇಳಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here