ಮಂಗಳೂರು: ಎತ್ತಿನಹೊಳೆ ಯೋಜನೆಯನ್ನು ವಿರೋಧಿಸಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಆರಂಭವಾಗಿರುವ ಪಂಚತೀರ್ಥ- ಸಪ್ತಕ್ಷೇತ್ರ ರಥಯಾಟ್ರೆ ಕುರಿತು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.
ಸುಳ್ಯದಲ್ಲಿ ನಡೆದ ಅರೆಭಾಷೆ ಸಾಹಿತ್ಯ ಸಂಸ್ಕೃತಿ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ್ದ ಸಚಿವರಲ್ಲಿ ಎತ್ತಿನಹೊಳೆ ಯೋಜನೆ ಕುರಿತು ಸಂಸದರ ನೇತೃತ್ವದಲ್ಲಿ ನಡೆಯುತ್ತಿರುವ ಯಾಟ್ರೆ ಕುರಿತು ಪ್ರತಿಕ್ರಿಯೆ ಕೇಳಿದಾಗ ನೋ ಕಮೆಂಟ್ಸ್ ನೀವೆಲ್ಲಾ ೫೦ ಬಾರಿ ಪ್ರಶ್ನೆಗಳನ್ನು ಕೇಳಿದ್ದಿರಿ. ಅದಕ್ಕೆ ೨೦ ಬಾರಿ ಉತ್ತರಿಸಿದ್ದೇನೆ. ಇನ್ನು, ಆ ಕುರಿತು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದಷ್ಟೇ ಹೇಳಿದರು.