ಮಂಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಣಾಮವಾಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆ ಎಂಬಲ್ಲಿ ನಡೆದಿದೆ.
ಗೋಪಿ ಜಯ(೬೬), ಮತ್ತು ಸುರೇಶ್(೪೭) ಮೃತಪಟ್ಟವರು. ಶೋಭಾ(೪೮) ಸಾವಿನಿಂದ ಪಾರಾಗಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಈ ಆತ್ಮಹತ್ಯೆ ಯತ್ನ ನಡೆದಿದೆ ಎಂದು ಹೇಳಲಾಗಿದೆ. ತಾಯಿ ಗೋಪಿಜಯ ಮತ್ತು ಪುತ್ರಿ ಶೋಭಾ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದರೆ, ಪುತ್ರ ಸುರೇಶ್ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.