Friday 19th, April 2024
canara news

ಜ್ಯುವೆಲ್ಲರಿ ಕಳವಿಗೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Published On : 14 Dec 2016   |  Reported By : Canaranews Network


ಮಂಗಳೂರು: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜೆರೆ ಪೇಟೆಯಲ್ಲಿರುವ ದಮಾಸ್ ಜ್ಯುವೆಲ್ಲರಿ ಅಂಗಡಿಯ ಶಟರ್ ಮುರಿದು ಜೂ.೧೦ರಂದು ರಾತ್ರಿ ಕಳವಿಗೆ ಯತ್ನಿಸಿದ್ದು ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಧುಗಿರಿ ತುಮಕೂರು ಮೇಕೆ ಬಂಡೆಮನೆ ನಿವಾಸಿಗಳಾದ ಮಂಜುನಾಥ ಯಾನೆ ಕೋಳಿ ಮಂಜ(೪೯) ಮಹಾಂತೇಶ್(೨೧) ಬಂಧಿತ ಆರೋಪಿಗಳು. ಕಾರ್ಯಾಚರಣೆಗೆ ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ, ಉಪಾಧೀಕ್ಷಕ, ಬೆಳ್ತಂಗಡಿ ವೃತ್ತ ನಿರೀಕ್ಷಕ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಎಸ್.ಐ. ರವಿ ಬಿ.ಎಸ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗಾಗಿ ತಂಡಗಳನ್ನು ರಚಿಸಿ ಬಲೆ ಬೀಸಿದ್ದರು.

ಈ ಬಗ್ಗೆ ವಿಶೇಷ ಮಾಹಿತಿ ಕಲೆ ಹಾಕಿ ಮಧುಗಿರಿ ಎಂಬಲ್ಲಿಂದ ಡಿ.೧೧ರಂದು ವಶಕ್ಕೆ ಪಡೆದುಕೊಂಡು ಕೃತ್ಯಕ್ಕೆ ಬಳಸಿದ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಆರೋಪಿಗಳನ್ನು ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here