ಮಂಗಳೂರು: ಎತ್ತಿನಹೊಳೆ ಯೋಜನೆ ಕುರಿತು ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಡಿಸೆಂಬರ್ ೨೬ರಂದು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಸಚಿವ ರಮಾನಾಥ ರೈ ತಿಳಿಸಿದ್ದಾರೆ.
ತುಂಬೆಯ ನೂತನ ಡ್ಯಾಂ ಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ಕರೆಯಲಾಗಿದ್ದು ಯೋಜನೆಗೆ ಸಂಬಂಧಿಸಿದ ಪ್ರದೇಶದ ಎಲ್ಲ ಶಾಸಕರಿಗೂ ಸಭೆಗೆ ಆಹ್ವಾನ ನೀಡಲಾಗಿದೆ.
ಇದರ ಜೊತೆ ಹೋರಾಟಗಾರರನ್ನೂ ಆಹ್ವಾನಿಸಲಾಗುತ್ತಿದೆ.ಈ ಸಭೆಯಲ್ಲಿ ಯೋಜನೆಗೆ ಸಂಬಂಧಿಸಿದ ಸಾಧಕ, ಬಾಧಕಗಳ ವಿಚಾರವನ್ನು ಅಲ್ಲಿ ಚರ್ಚಿಸಲಾಗುವುದು. ಈ ಬಾರಿಯ ಸಭೆಯಲ್ಲಿ ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಸಹಿತ ಯೋಜನೆಗೆ ಸಂಬಂಧಿಸಿದ ಎಲ್ಲರೂ ಭಾಗವಹಿಸುವ ಕಾರಣ ಈ ಬಗ್ಗೆ ಸ್ಪಷ್ಟ ತೀರ್ಮಾನ ದೊರಕಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.