ಮಂಗಳೂರು: ಕೊಡಗಿನ ದಿಡ್ಡಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಭೂಮಿಯಲ್ಲಿ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬಹುದು.ಆದರೆ, ಅರಣ್ಯ ಇಲಾಖೆಗೆ ಕಾನೂನು ಪ್ರಕಾರ ಅಧಿಕಾರ ಇಲ್ಲ ಎಂದು ಅರಣ್ಯ ಸಚಿವ ರಮಾನಾಥ ರೈ ಅವರು ಹೇಳಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಅವರು, ಅರಣ್ಯದಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳಿಗೆ ಮನಮೋಹನ್ ಸಿಂಗ್ ಪ್ರಧಾನಿಯಾಗಿರುವ ಸಂದರ್ಭದಲ್ಲಿ ಅರಣ್ಯವಾಸಿಗಳ ಅನುಭೋಗದ ಹಕ್ಕಿನ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು.
೨೦೦೫ಕ್ಕೂ ಮೊದಲು ಅರಣ್ಯದಲ್ಲಿ ವಾಸ ಮಾಡುತ್ತಿರುವವರಿಗೆ ಹಾಗೂ ೭೫ ವರ್ಷಕ್ಕೂ ಹೆಚ್ಚು ವರ್ಷ ಅರಣ್ಯದಲ್ಲಿ ವಾಸ ಮಾಡುತ್ತಿರುವ ಕುಟುಂಬಗಳಿಗೆ ಅರಣ್ಯದ ಅನುಭೋಗದ ಹಕ್ಕಿನ ಅವಕಾಶ ಲಭಿಸಲಿದೆ ಎಂದು ಅವರು ಮಾಹಿತಿ ನೀಡಿದರು.