ಮಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯ ಸಂಘ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ದ.ಕ.ಜಿಲ್ಲಾ ಪಂಚಾಯತ್ ಮುಂಭಾಗ ಮಂಗಳವಾರ ಧರಣಿ ಮುಷ್ಕರ ನಡೆಸಿದರು.
ಈ ಸಂದರ್ಭ ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ದ.ಕ.ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ವಿಶಾಲಾಕ್ಷಿ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರು ಕಳೆದ ೪೦ ವರ್ಷಗಳಿಂದ ಅತ್ಯಲ್ಪ ಗೌರವಧನಕ್ಕೆ ದುಡಿಯುತ್ತಿದ್ದು ಸರ್ಕಾರದ ಎಲ್ಲಾ ಕೆಲಸಗಳನ್ನು ತಳಮಟ್ಟದ ಜನರಿಗೆ ತಲುಪಿಸುವಲ್ಲಿ ಶ್ರಮ ಪಟ್ಟಿದ್ದಾರೆ.ಆದರೆ,
ನಮಗೆ ಈವರೆಗೆ ಯಾವುದೇ ರೀತಿಯ ಸಂಭಾವನೆ ಸಿಗದಿರುವುದು ಬೇಸರದ ಸಂಗತಿ..ಹಾಗಾಗಿ ಈ ಕೂಡಲೇ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕೆಂಬ ಆದೇಶವನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.ಈ ವೇಳೆ ಕಾರ್ಯದರ್ಶಿ ಚಂದ್ರಾವತಿ, ಕೋಶಾಧಿಕಾರಿ ಲತಾ ಮತ್ತಿತರರು ಉಪಸ್ಥಿತರಿದ್ದರು.ಮುಷ್ಕರಕ್ಕೆ ಮುನ್ನ ಕರಾವಳಿ ಉತ್ಸವ ಮೈದಾನದಿಂದ ಉಪನಿರ್ದೇಶಕರ ಕಚೇರಿವರೆಗೆ ಕಾಲ್ನಡಿಗೆ ಜಾಥಾ ನಡೆಯಿತು.