Thursday 25th, April 2024
canara news

ಬೈಕ್ಗೆ ಟಿಪ್ಪರ್ ಢಿಕ್ಕಿ ಸವಾರ ಸಾವು, ಟಿಪ್ಪರ್ ಚಾಲಕ ಪರಾರಿ

Published On : 24 Dec 2016   |  Reported By : Canaranews Network


ಮಂಗಳೂರು: ಮೂಡಬಿದಿರೆ ಶಿರ್ತಾಡಿಯಿಂದ ಗುರುಪುರ ಕೈಕಂಬದಲ್ಲಿ ಮದುವೆ ಸಮಾರಂಭಕ್ಕೆ ಬೈಕ್ನಲ್ಲಿ ಹೋಗುತ್ತಿದ್ದ ಶಿರ್ತಾಡಿಯ ಸಂತೋಷ್ ರಾಮಣ್ಣ ಪೂಜಾರಿ (25)ಯವರ ಬೈಕ್ಗೆ ಗುರುಪುರ ಕೈಕಂಬದ ಕಡೆಯಿಂದ ಬಂದ ಟಿಪ್ಪರ್ ಗಂಜಿಮಠ ಜಂಕ್ಷನ್ನಲ್ಲಿ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಮೃತ ಸಂತೋಷ್ ಅವರು ಪೈಂಟರ್ಕೆಲಸ ಮಾಡುತ್ತಿದ್ದರು. ಇವರು ಗುರುಪುರ ಕೈಕಂಬದಲ್ಲಿ ನಡೆಯುವ ಮದುವೆ ಸಮಾರಂಭಕ್ಕೆ ಬೈಕ್ನಲ್ಲಿ ತೆರಳುತ್ತಿದ್ದರು. ಗುರುಪುರ ಕೈಕಂಬದಿಂದ ಕಡೆಯಿಂದ ಬಂದ ಮರಳಿನ ಟಿಪ್ಪರ್ ಅವರ ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ನ ಹಿಂಬದಿಯ ಚಕ್ರ ಅವರ ತಲೆಯ ಮೇಲೆ ಹರಿದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಘಟನೆ ನಡೆದ ತತ್ಕ್ಷಣ ಟಿಪ್ಪರ್ ಲಾರಿ ಚಾಲಕ ಲಾರಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಮೂಡಬಿದಿರೆ -ಮಂಗಳೂರು ರಾಷ್ಟ್ರೀಯ ಹೆದ್ದಾರಿ 169ರಲ್ಲಿ ನಡೆದ ಈ ಘಟನೆಯಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

 

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here