ಮಂಗಳೂರು: ಮಂಗಳೂರು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಉಮೇಶ್ ಗಾಣಿಗ ಅವರ ಪುತ್ರ ಕಾರ್ತಿಕ್ ರಾಜ್ ಕೊಲೆ ಆರೋಪಿಗಳನ್ನು ಬಂಧಿಸಲು ಅಸಮರ್ಥವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಭಾವೋದ್ವೇಗದ ಮಾತುಗಳನ್ನಾಡಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆ ವಿರುದ್ಧ ದ.ಕ.ಜಿಲ್ಲೆಯಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಭಾನುವಾರ ಬೆಳಗ್ಗೆ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಪಜೀರು ಸುದರ್ಶನ ನಗರದಿಂದ ಕೊಣಾಜೆ ಠಾಣೆಯವರೆಗೆ ನಡೆದ ಮೌನ ಜಾಥ ಹಾಗೂ ಠಾಣೆಯೆದುರು ನಡೆದ ಪ್ರತಿಭಟನಾ ಸಭೆ ನಡೆದಿದ್ದು, ಇದರಲ್ಲಿ ಭಾಗವಹಿಸಿ ಮಾತನಾಡಿದ ನಳಿನ್ ಕುಮಾರ್ ಕಟೀಲ್ , ಹತ್ತು ದಿನಗಳಲ್ಲಿ ಕಾರ್ತಿಕ್ ರಾಜ್ ಕೊಲೆ ಆರೋಪಿಗಳನ್ನು ಬಂಧಿಸದೆ, ಹಿಂದುಗಳಿಗೆ ರಕ್ಷಣೆಯನ್ನು ನೀಡಲು ವಿಫಲವಾದಲ್ಲಿ ಜಿಲ್ಲೆಗೆ ಬೆಂಕಿ ಹಾಕಲು ಸಿದ್ಧ ಎಂದು ಭಾವೋದ್ವೇಗದ ಮಾತುಗಳನ್ನಾಡಿದರು.