ಮಂಗಳೂರು: ಜಿಲ್ಲೆಗೆ ಬೆಂಕಿ ಹಚ್ಚಲಾಗುವುದು ಎಂದು ಹೇಳುವ ಮೂಲಕ ದ.ಕ. ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಜವಾಬ್ದಾರಿಯುತ ಪ್ರತಿನಿಧಿಯಾಗಿ ಬೇಜವಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಆಹಾರ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸದರು ಜಿಲ್ಲೆಯ ಏಕತೆ,ಸಾಮರಸ್ಯ ಹಾಗೂ ಅಭಿವೃದ್ಧಿಗೆ ಪೂರಕವಾಗಿ ಮಾತನಾಡಬೇಕೆ ಹೊರತು ಬೆಂಕಿ ಹಚ್ಚುವಂತಹ ಹೇಳಿಕೆ ನೀಡಿರುವುದು ಶೋಭೆ ತರುವಂತದ್ದಲ್ಲ.
ಇಂತಹ ಹೇಳಿಕೆಗಳ ಮೂಲಕ ಜಿಲ್ಲೆಯಲ್ಲಿ ಹಿಂಸೆಗೆ ಪ್ರಚೋದನೆ ನೀಡುವ ಕೆಲಸವನ್ನು ಸಂಸದರು ಮಾಡೀದ್ದಾರೆ. ಬೆಂಕಿ ಹಚ್ಚುವವರು ಬೇಕಾ ಅಥವಾ ನಂದಿಸುವವರು ಬೇಕಾ ಎಂದು ಜನತೆ ನಿರ್ಧರಿಸಬೇಕಿದೆ ಎಂದು ಅವರು ಹೇಳಿದರು.