ಮಂಗಳೂರು: ಬಿಕರ್ನಕಟ್ಟೆ ಜಯಶ್ರೀ ಗೇಟ್ ಬಳಿ ಒಂಭತ್ತು ತಿಂಗಳ ಹಿಂದೆ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಸಿಸಿಬಿ ಪೊಲೀಸರು ಆರೋಪಿ ಕಾರ್ಕಳ ತಾಲೂಕು ಇರ್ವತ್ತೂರಿನ ಜೀವನ್ ಪೂಜಾರಿಯನ್ನು ಬಂಧಿಸಿ ಚಿನ್ನದ ಸರ ಹಾಗೂ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ವಿವರ:
2016 ಮಾರ್ಚ್ 29 ರಂದು ಬಿಕರ್ನಕಟ್ಟೆಯ ಪೂರ್ಣಿಮಾ ಮತ್ತು ಅವರ ಅಜ್ಜಿ ಅಪ್ಪಿ ಹಾಗೂ ಮನೆಯವರು ಆಡುಮರೋಳಿ ದೇವಸ್ಥಾನಕ್ಕೆ ಹೋಗಿ ವಾಪಾಸು ಬಿಕರ್ನಕಟ್ಟೆ ಜಯಶ್ರೀ ಗೇಟ್ ಕಡೆಗೆ ರಾತ್ರಿ 9 ಗಂಟೆಗೆ ನಡೆದುಕೊಂಡು ಹೋಗುತ್ತಿದ್ದಾಗ ಓರ್ವ ಅಪರಿಚಿತ ಯುವಕ ತಾನು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವನ್ನು ಚಾಲನೆ ಸ್ಥಿತಿಯಲ್ಲಿಟ್ಟು ಅಪ್ಪಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದನು. ಈ ಬಗ್ಗೆ ಪೂರ್ಣಿಮಾ ಅವರು ನೀಡಿದ ದೂರಿನಂತೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.