ಕುಂದಾಪುರ:ಸಾಹಿತ್ಯ, ಸಾಂಸ್ಕøತಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಈ ವರ್ಷ ವಿಂಶತಿ ಉತ್ಸವದ ಸಂಭ್ರಮದಲ್ಲಿರುವ ಜಿಲ್ಲಾ ಪ್ರಶಸ್ತಿ ಪುರಸ್ಕøತ ಬೀಜಾಡಿ-ಗೋಪಾಡಿ ಮಿತ್ರ ಸಂಗಮ ಸಂಸ್ಥೆಯನ್ನು ಬ್ರಹ್ಮಾವರದಲ್ಲಿ ನಡೆದ 11ನೇ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 2ನೇ ದಿನದ ನುಡಿಹಬ್ಬದಲ್ಲಿ ಸಂಘ ಸಂಸ್ಥೆ ವಿಭಾಗದಲ್ಲಿ ಮಿತ್ರ ಸಂಗಮದ ಸಾಧನೆಯನ್ನು ಕಂಡು ಸನ್ಮಾನಿಸಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲಾ ಘಟಕ ಮತ್ತು ಬ್ರಹ್ಮಾವರ ಅಜಪುರ ಕರ್ನಾಟಕ ಸಂಘದ ಆಶ್ರಯದಲ್ಲಿ ಉಡುಪಿ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರು ಸಂಸ್ಥೆಯ ಅಧ್ಯಕ್ಷ ಅನೂಪಕುಮಾರ್ ಬಿ.ಆರ್ ಅವರನ್ನು ಸಂಸ್ಥೆಯ ಪರವಾಗಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕ್ಯಾ.ಗಣೇಶ್ ಕಾರ್ಣಿಕ್,ಮಾಜಿ ಶಾಸಕ ಕೆ.ರಘುಪತಿ ಭಟ್, ಸಮ್ಮೇಳನಾಧ್ಯಕ್ಷ ಪ್ರೊ.ಎಂ.ರಾಮಚಂದ್ರ, ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ, ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್, ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷ ಅಶೋಕ್ ಭಟ್, ಬ್ರಹ್ಮಾವರ ಹೋಬಳಿಯ ಕಸಾಪ ಅಧ್ಯಕ್ಷ ಮೋಹನ್ ಉಡುಪ ಹಂದಾಡಿ ಮತ್ತಿತರರು ಉಪಸ್ಥಿತರಿದ್ದರು.ಆರೂರು ತಿಮ್ಮಪ್ಪ ಶೆಟ್ಟಿ ಕಾರ್ಯಕ್ರಮ ಸ್ವಾಗತಿಸಿ, ನಿರೂಪಿಸಿದರು.