ಕುಂದಾಪುರ: ದಡಾರ,ರುಬೆಲ್ಲಾ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. 9 ತಿಂಗಳುಗಳಿಂದ 15 ವರ್ಷದ ವರೆಗಿನ ಎಲ್ಲಾ ಮಕ್ಕಳು ಕಡ್ಡಾಯವಾಗಿ ಈ ಚುಚ್ಚುಮದ್ದನ್ನು ಪಡೆಯಬೇಕು. ಸರಕಾರಿ ಜಾರಿಗೆ ತಂದ ಈ ಯೋಜನೆಯ ಆರೋಗ್ಯ ದೃಷ್ಟಿಯಲ್ಲಿ ಅತ್ಯುತ್ತಮವಾಗಿದೆ ಎಂದು ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞೆ ಡಾ.ಶೈಲಜಾ ಹೇಳಿದರು.
ಅವರು ಮಂಗಳವಾರ ಉಡುಪಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಕುಂದಾಪುರ ಸಾರ್ವಜನಿಕ ಆಸ್ಪತ್ರೆ ಹಾಗೂ ಸೈಂಟ್ ಮೇರಿಸ್ ಪ್ರೌಢಶಾಲೆಯ ಆಶ್ರಯದಲ್ಲಿ ನಡೆದ ದಡಾರ,ರುಬೆಲ್ಲಾ ಲಸಿಕಾ ಅಭಿಯಾನದಲ್ಲಿ ಮಾಹಿತಿ ನೀಡಿ ಮಾತನಾಡಿದರು.
ಕುಂದಾಪುರ ಸಾರ್ವಜನಿಕ ಆಸ್ಪತ್ರೆಯ ಕಿರಿಯ ಆರೋಗ್ಯ ಸಹಾಯಕ ಅಜೇಯ್ ಭಂಡಾರ್ಕ್ರ್ ಮಾಹಿತಿ ನೀಡಿದರು.ವೇದಿಕೆಯಲ್ಲಿ ಹಿರಿಯ ಆರೋಗ್ಯ ಸಹಾಯಕ ಸದಾನಂದ ಹೆಬ್ಬಾರ್,ಸೈಂಟ್ ಮೇರಿಸ್ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಚೇತನಾ,ಸೈಂಟ್ ಮೇರಿಸ್ ಪ್ರಾಥಮಿಕ ಶಾಲಾ ಡೊರತಿ ಸುವಾರಿಸ್ ಉಪಸ್ಥಿತರಿದ್ದರು.
ಜಿಲ್ಲಾ ಸಂಯೋಜಕ ಸಚ್ಚೀದಾನಂದ ಸ್ವಾಗತಿದರು.ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.