ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ `ಸಮೂಹ ಮಾಧ್ಯಮ ವರ್ತಮಾನದ ತಲ್ಲಣಗಳು' ಉಪನ್ಯಾಸ ಕಾರ್ಯಕ್ರಮವನ್ನು 13.2.2017ನೇ ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ, ರಾನಡೆ ಭವನ, ವಿದ್ಯಾನಗರಿ, ಸಾಂತಾಕ್ರೂಜ್ (ಪೂರ್ವ), ಮುಂಬಯಿ ಇಲ್ಲಿ ಆಯೋಜಿಸಿದೆ.
ಡಾ| ಸದಾನಂದ ಪೆರ್ಲ (ನಿರ್ದೇಶಕರು, ಆಕಾಶವಾಣಿ ಮಂಗಳೂರು) ಇವರ ಉಪನ್ಯಾಸ ನೀಡಲಿದ್ದಾರೆ. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅಧ್ಯಕ್ಷತೆ ಹಾಗೂ ಡಾ| ಜಿ.ಎನ್ ಉಪಾಧ್ಯ (ಮುಖ್ಯಸ್ಥರು, ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯ) ಮಾರ್ಗದರ್ಶನದಲ್ಲಿ ನಡೆಸಲ್ಪಡುವ ಕಾರ್ಯಕ್ರಮದಲ್ಲಿ ಮಹಾನಗರದಲ್ಲಿನ ಸಾಹಿತ್ಯ ಮತ್ತು ಪತ್ರಿಕಾಸಕ್ತರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗಾಗಿ ಸಹಕರಿಸುವಂತೆ ಕನ್ನಡ ವಿಭಾಗದ ಸಹಾಯಕಿ ಡಾ| ಪೂರ್ಣಿಮಾ ಎಸ್. ಶೆಟ್ಟಿ ಹಾಗೂ ಪತ್ರಕರ್ತರ ಸಂಘದ ಗೌ| ಪ್ರ| ಕಾರ್ಯದರ್ಶಿ ರೋನ್ಸ್ ಬಂಟ್ವಾಳ್ ಸರ್ವರಿಗೂ ಆದರದ ಸ್ವಾಗತ ಬಯಸಿದ್ದಾರೆ.