Wednesday 24th, April 2024
canara news

ಫೆ.13: ಡಾ| ಸದಾನಂದ ಪೆರ್ಲ ಅವರಿಂದ ಮಾಧ್ಯಮದ ಬಗ್ಗೆ ಉಪನ್ಯಾಸ

Published On : 09 Feb 2017   |  Reported By : Rons Bantwal


ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ ಹಾಗೂ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ರಿ.) ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ `ಸಮೂಹ ಮಾಧ್ಯಮ ವರ್ತಮಾನದ ತಲ್ಲಣಗಳು' ಉಪನ್ಯಾಸ ಕಾರ್ಯಕ್ರಮವನ್ನು 13.2.2017ನೇ ಸೋಮವಾರ ಮಧ್ಯಾಹ್ನ 2.00 ಗಂಟೆಗೆ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ, ರಾನಡೆ ಭವನ, ವಿದ್ಯಾನಗರಿ, ಸಾಂತಾಕ್ರೂಜ್ (ಪೂರ್ವ), ಮುಂಬಯಿ ಇಲ್ಲಿ ಆಯೋಜಿಸಿದೆ.

ಡಾ| ಸದಾನಂದ ಪೆರ್ಲ (ನಿರ್ದೇಶಕರು, ಆಕಾಶವಾಣಿ ಮಂಗಳೂರು) ಇವರ ಉಪನ್ಯಾಸ ನೀಡಲಿದ್ದಾರೆ. ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅಧ್ಯಕ್ಷತೆ ಹಾಗೂ ಡಾ| ಜಿ.ಎನ್ ಉಪಾಧ್ಯ (ಮುಖ್ಯಸ್ಥರು, ಕನ್ನಡ ವಿಭಾಗ, ಮುಂಬಯಿ ವಿಶ್ವವಿದ್ಯಾಲಯ) ಮಾರ್ಗದರ್ಶನದಲ್ಲಿ ನಡೆಸಲ್ಪಡುವ ಕಾರ್ಯಕ್ರಮದಲ್ಲಿ ಮಹಾನಗರದಲ್ಲಿನ ಸಾಹಿತ್ಯ ಮತ್ತು ಪತ್ರಿಕಾಸಕ್ತರು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗಾಗಿ ಸಹಕರಿಸುವಂತೆ ಕನ್ನಡ ವಿಭಾಗದ ಸಹಾಯಕಿ ಡಾ| ಪೂರ್ಣಿಮಾ ಎಸ್. ಶೆಟ್ಟಿ ಹಾಗೂ ಪತ್ರಕರ್ತರ ಸಂಘದ ಗೌ| ಪ್ರ| ಕಾರ್ಯದರ್ಶಿ ರೋನ್ಸ್ ಬಂಟ್ವಾಳ್ ಸರ್ವರಿಗೂ ಆದರದ ಸ್ವಾಗತ ಬಯಸಿದ್ದಾರೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here