Wednesday 24th, April 2024
canara news

ಮುಖ್ಯಮಂತ್ರಿ ಸಿದ್ಧರಾಮಯ್ಯ-ಸಚಿವ ಯು.ಟಿ ಖಾದರ್-ಮಧು ಬಂಗಾರಪ್ಪ ಭೇಟಿಗೈದ ಭಂಡಾರಿ ಮಹಾ ಮಂಡಲದ ನಿಯೋಗ

Published On : 02 Apr 2017   |  Reported By : Rons Bantwal


(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)

ಬೆಂಗಳೂರು, ಮಾ.31: ಭಂಡಾರಿ ಮಹಾ ಮಂಡಲದ ನಿಯೋಗವು ಕಳೆದ ಗುರುವಾರ ಸಂಜೆ ಬೆಂಗಳೂರುನ ಮುಂಖ್ಯಮಂತ್ರಿಗಳ ಸರಕಾರಿ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಗೈದು ಬರುವ ಮೇ.08ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಬಾರ್ಕೂರುನಲ್ಲಿ ನಡೆಸಲು ಉದ್ದೇಶಿಸಿರುವ ಭಂಡಾರಿ ಮಹಾ ಸಮಾವೇಶನದ ಭವ್ಯ ಸಮಾರಂಭ ಉದ್ಘಾಟಿಸುವಂತೆ ಕೋರಿತು.

ಭಂಡಾರಿ ಮಹಾ ಮಂಡಲದ ಸಂಸ್ಥಾಪಕಧ್ಯಕ್ಷ, ಶ್ರೀ ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಬಾರ್ಕೂರು ಇದರ ಆಡಳಿತ ಮೊಕ್ತೇಸರ ಹಾಗೂ ಕಚ್ಚೂರು ಶ್ರೀ ನಾಗೇಶ್ವರ ಸೇವಾ ಟ್ರಸ್ಟ್ ಬಾರ್ಕೂರು ಅಧ್ಯಕ್ಷ ಕಡಂದಲೆ ಸುರೇಶ್ ಎಸ್.ಭಂಡಾರಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಆಹ್ವಾನಿಸಿ ಜಗದ್ವ್ಯಾಪಿ ಪಸರಿರುವ ಪ್ರತಿಷ್ಠಿತ ಭಂಡಾರಿ ಸಮುದಾಯವು ತನ್ನ ಕಲದೇವರನ್ನು ಆರಾಧಿಸಿರುವ ಅಂದಾಜು ಒಂಭತ್ತು ಶತಮಾನಗಳ ಇತಿಹಾಸವುಳ್ಳ ಕಚ್ಚೂರು ಶ್ರೀ ನಾಗೇಶ್ವರ ದೇವರ ವಾರ್ಷಿಕ ಪ್ರತಿಷ್ಠಾಪನಾ ವರ್ಧಂತ್ಯುತ್ಸವದ ಸಿದ್ಧತೆ ಬಗ್ಗೆ ಸಂಕ್ಷೀಪ್ತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಚಿವ ಯು.ಟಿ ಖಾದರ್ ರಿಪೆÇೀರ್ಟರ್ಸ್ ಗೀಲ್ಡ್ ಅಧ್ಯಕ್ಷ, ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಾಧಿಕಾರಿ ಕೆ.ವಿ ಪ್ರಭಾಕರನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹಾಗಾರ ದಿನೇಶ್ ಅಮೀನ್ ಮಟ್ಟು ಮತ್ತಿತರರು ಉಪಸ್ಥಿತರಿದ್ದರು.

ಅಂತೆಯೇ ಸೊರಬ ಕ್ಷೇತ್ರದ ಶಾಸಕ, ಜಾತ್ಯಾತೀತ ಜನತಾ ದಳ (ಜೆಡಿಎಸ್ ಪಕ್ಷ) ನೇತಾರ ಎಸ್.ಮಧು ಬಂಗರಪ್ಪ, ಬೆಂಗಳೂರುನ ಉದ್ಯಮಿ ವಿ.ಕೆ ಮೋಹನ್ (ಕಪಾಲಿ ಮೋಹನ್) ಅವರನ್ನೂ ಆಹ್ವಾನಿಸಲಾಯಿತು. ಈ ಸಂದರ್ಭದಲ್ಲಿ ಭಂಡಾರಿ ಮಹಾ ಮಂಡಲ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ, ಮಹಾ ಮಂಡಲದ ಗೌರವ ಪ್ರಧಾನ ಕಾರ್ಯದರ್ಶಿ ಮತ್ತು ಸವಿತಾ ಮಾರ್ಗದರ್ಶಿ ಮಾಸಿಕದ ಸಂಪಾದಕ ಸೋಮಶೇಖರ ಎಂ.ಭಂಡಾರಿ, ಉತ್ಸವ ಸಮಿತಿ ಅಧ್ಯಕ್ಷ ಡಾ| ಶಿವರಾಮ ಕೆ.ಭಂಡಾರಿ, ಪತ್ರಕರ್ತ ಸೋಮಶೇಖರ್ ಪಿ ಮತ್ತಿತರರು ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here