Saturday 20th, April 2024
canara news

ರಾಜ್ಯ ಸರ್ಕಾರದ ವಿರುದ್ಧ ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

Published On : 05 Apr 2017   |  Reported By : Canaranews Network


ಮಂಗಳೂರು: ರಾಜ್ಯ ಸರ್ಕಾರವನ್ನು ಮಾಫಿಯಾಗಳು ಹೇಗೆ ನಿಯಂತ್ರಣದಲ್ಲಿಟ್ಟಿವೆ ಎಂಬುದಕ್ಕೆ ಉಡುಪಿ ಜಿಲ್ಲಾಧಿಕಾರಿ, ಎಸಿ ಅವರ ಕೊಲೆ ಯತ್ನ ಸಾಕ್ಷಿಯಾಗಿದೆ. ಈ ಮಾಫಿಯಾದ ಹಿಂದೆ ರಾಜ್ಯ ಸರ್ಕಾರದ ಕೈವಾಡವಿರುವುದು ಸ್ಪಷ್ಟ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೪ ವರ್ಷಗಳಿಂದಲೂ ರಾಜ್ಯದಲ್ಲಿ ಇಂತಹ ಗೂಂಡಾ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಲೇ ಇವೆ.

ಮೂಡಬಿದಿರೆಯ ಪ್ರಶಾಂತ್ ಹತ್ಯೆ, ರುದ್ರೇಶ್ ಹತ್ಯೆ, ಉಳ್ಳಾಲದ ಕಾರ್ತಿಕ್ ರಾಜ್ ಹತ್ಯೆ ಹೀಗೆ ಒಂದರ ಹಿಂದೆ ಒಂದು ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಆದರೆ, ರಾಜ್ಯ ಸರ್ಕಾರ್ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಸೂಕ್ತ ಮರಳು ನೀತಿ ರೂಪಿಸದೆ ಇರುವುದೇ ಇಂತಹ ಚಟುವಟಿಕೆಗಳಿಗೆ ಕಾರಣ ಎಂದು ಆರೋಪಿಸಿದರು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here