Thursday 18th, April 2024
canara news

ಬಾಲಕಿ ಮೇಲೆ ದಿನಸಿ ಅಂಗಡಿ ಮಾಲೀಕನಿಂದ ಅತ್ಯಾಚಾರ !

Published On : 08 Apr 2017   |  Reported By : Bernard J Costa


ಕುಂದಾಪುರ: ಇನ್ನೂ ಪ್ರಪಂಚವನ್ನು ಬೆರಗು ಕಂಗಳಿಂದ ದಿಟ್ಟಿಸುವ ಎಂಟು ವರ್ಷದ ಮುಗ್ಧ ಅಪ್ರಾಪ್ತ ಬಾಲಕಿ ಮೇಲೆ ನಡುವಯಸಿನ ವ್ಯಕ್ತಿಯೋರ್ವ ಅತ್ಯಾಚಾರ ನಡೆಸಿದ ಅತ್ಯಂತ ಕಳವಳಕಾರಿ ಘಟನೆಯೊಂದು ತಾಲೂಕಿನ ಬಿದ್ಕಲ್‍ಕಟ್ಟೆ ಜರಗಿದೆ. ತೀವೃವಾಗಿ ಅಸ್ವಸ್ಥಗೊಂಡಿರುವ . ಬಾಲಕಿ ಇದೀಗ ಮಣಿಪಾಲ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ .

ಬಿದ್ಕಲ್‍ಕಟ್ಟೆ ಪೇmಯಲ್ಲಿ ದಿನಸಿ ಅಂಗಡಿ ಹೊಂದಿರುವ ರಾಮದಾಸ್ ಪ್ರಭು(53) ಎಂಬ ವಿಕೃತ ಕಾಮಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಕಾಮುಕ. ಅತ್ಯಾಚಾರಕ್ಕೊಳಗಾದ ಬಾಲಕಿಯ ಕುಟುಂಬದವರು ಮೂಲತಃ ಉತ್ತರಕನ್ನಡದವರಾಗಿದ್ದಾರೆ. ಆಕೆಯ ತಂದೆ ಬಿದ್ಕಲ್ ಕಟ್ಟೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮೂಕಿ ಪತ್ನಿ ಹಾಗೂ ಬಾಲಕಿ ಮಗಳ ಜತೆ ಬಿಡಾರ ಹೂಡಿದ್ದ ಎನ್ನಲಾಗಿದೆ. ಮರುದಿನ ಬಾಲಕಿಯ ಆರೋಗ್ಯದಲ್ಲಿ ಏರುಪೇರಾಗಿ ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ್ದು ಅಲ್ಲಿನ ವೈದ್ಯರ ಸಲಹೆ ಮೇರೆಗೆ ಕೂಡಲೇ ಬಳಿಕ ಮಣಿಪಾಲ ಆಸ್ಪತ್ರೆಗೆ ಸಾಗಿಸಲಾಗಿತ್ತು.

ಅಲ್ಲಿ ಬಾಲಕಿಯನ್ನು ವಿಚಾರಿಸಿದಾಗ ಕೀಚಕ ರಾಮದಾಸ್ ಪ್ರಭುವಿನ ಅಸಹ್ಯ ಕಾಮುಕತನ ಹೊರ ಬಂದಿದೆ.

ಒಂದೆರಡು ದಿನಗಳ ಹಿಂದೆ ಬಾಲಕಿ ಅಂಗಡಿಗೆ ಹೋಗಿದ್ದ ಸಂದರ್ಭದಲ್ಲಿ ಕಾಮುಕ ರಾಮದಾಸ್ ಬಾಲಕಿಯನ್ನು ಬೆದರಿಸಿ ಕಿರಾತಕ ಕೃತ್ಯವೆಸಗಿದ್ದಾನೆ ಎಂದು ತಿಳಿದುಬಂದಿದೆ. ಬೆದರಿದ ಬಾಲಕಿ ಮನೆಯಲ್ಲೂ ಈ ವಿಚಾರ ತಿಳಿಸಿಲ್ಲ.

ಸದ್ಯ ಆರೋಪಿ ತಲೆಮರೆಸಿಕೊಂಡಿದ್ದು, ಕೋಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಲೆಮರೆಸಿಕೊಂಡ ಆರೋಪಿಯ ಬಂಧನ ವಾಗಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ.

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here