ಮಂಗಳೂರು: ಪ್ರಧಾನಿ ನರೇಂದ್ರ ಮೇದಿ ಅವರು ಭಾಷಣ ಮಾಡುತ್ತಲೇ ಕಾಲ ಕಳೆಯುತ್ತಿದ್ದು, ಇದರಿಂದ ಬಡವರ ಹೊಟ್ಟೆ ತುಂಬುದಿಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಮೌನವಾಗಿದ್ದು, ಹೆಚ್ಚು ಕೆಲಸ ಮಾಡಿ ತೋರಿಸಿದ್ದರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಕೋಡಿಜಾಲ್ ಇಬ್ರಾಹಿಂ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಭಾಷಣದಿಂದ ಬಡವರ ಹೊಟ್ಟೆ ತುಂಬಲ್ಲ. ಬಡವರಿಗೆ ಪೂರಕವಾಗದ ಯೋಜನೆಗಳನ್ನು ಮೋದಿ ಜಾರಿಗೊಳಿಸಲಿ ಎಂದರು. ಇನ್ನು, ಪಕ್ಷದಲ್ಲಿದ್ದುಕೊಂಡು ಪಕ್ಷದ ವಿರುದ್ಧ ಮಾತನಾಡುವವರು ಎಲ್. ಕೆ. ಅಡ್ವಾಣಿಯವರನ್ನು ನೋಡಿ ಕಲಿಯಬೇಕು. ಅವರಿಗೆ ಪಕ್ಷ ಯಾವುದೇ ಸ್ಥಾನ ನೀಡದಿದ್ದರೂ,ಅವರು ಪಕ್ಷದ ವಿರುದ್ಧ ಏನನ್ನೂ ಮಾತನಾಡುತ್ತಿಲ್ಲ ಎಂದು ಹೇಳಿದರು.