ಮಂಗಳೂರು: ರಾಜ್ಯದೆಲ್ಲೆಡೆ ಬರ ಇದ್ದಾಗಲೂ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ್ದ ರಾಜ್ಯ ಸರ್ಕಾರ ಭ್ರಷ್ಟಚಾರದಲ್ಲಿ ಮುಳುಗಿದೆ. ಬರ ಹಾಗೂ ಬೆಲೆ ಏರಿಕೆಯ ಬೇಗೆಯಿಂದ ಬೆಸತ್ತ ಜನರಿಗೆ ವಿದ್ಯುತ್ ದರ ಏರಿಕೆ ಮತ್ತಷ್ಟು ಶಾಕ್ ನೀಡಿದೆ. ಬರ ನಿರ್ವಹಣೆಯಲ್ಲೂ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಸುದ್ದಿಗಾರರ ಜೊತೆ ಮಾತನಾಡಿದರು. ಸಾಮಾನ್ಯ ಹಾಗೂ ಮಧ್ಯಮ ವರ್ಗದ ಗ್ರಾಹಕರಿಗೆ ವಿದುತ್ಯ್ ದರ ಏರಿಕೆ ಹೊರೆಯಾಗಿದ್ದು, ಅದನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದರು. ವೈಜ್ಝ್ನಾನಿಕ ಹಾಗೂ ಆಧುನಿಕ ವಿಧಾನ ಮೂಲಕ ವಿದ್ಯುತ್ ಉತ್ಪಾದನೆ, ಪ್ರಸರಣ ಮತ್ತು ವಿತರಣೆಯಲ್ಲಿ ಆಗುವ ಸೋರಿಕೆ ತಡೆಗಟ್ಟಿದರೆ ದರ ಏರಿಸುವ ಅಗತ್ಯವಿಲ್ಲ. ಈ ಬಗ್ಗೆ ವೈಜ್ಝ್ನಾನಿಕ ಚಿಂತನೆ ನಡೆಸಬೇಕೆಂದು ಒತ್ತಾಯಿಸಿದರು.