ಮಂಗಳೂರು: ದ.ಕ. ಸಂಸದ ನಳಿನ್ಕುಮಾರ್ ಕಟೀಲು ಅವರು ಹೊಸದಿಲ್ಲಿ ಪಾರ್ಲಿಮೆಂಟ್ ಹೌಸ್ನಲ್ಲಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿಯಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಸಿಐಎಸ್ಎಫ್ ಭದ್ರತಾ ಸಿಬಂದಿ ನೇಮಿಸುವಂತೆ ಮನವಿ ಮಾಡಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಂಜೂರಾದ 226 ಸಿಐಎಸ್ಎಫ್ ಭದ್ರತಾ ಸಿಬಂದಿಯಲ್ಲಿ ಕೇವಲ 208 ಮಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಹೀಗಾಗಿ ನಿಲ್ದಾಣ ಭದ್ರತಾ ಸಿಬಂದಿ ಕೊರತೆ ಎದುರಿಸುತ್ತಿದೆ. ಇದರಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.