Thursday 8th, May 2025
canara news

ಹೈಟೆನ್ಶನ್ ತಂತಿ ತಗುಲಿ ಮಂಗಳೂರಿನಲ್ಲಿ ಯುವಕ ಸಾವು

Published On : 15 Apr 2017   |  Reported By : Canaranews Network


ಮಂಗಳೂರು: ಬೋರ್ ವೆಲ್ ಪೈಪ್ ಹೊರತೆಗೆಯುವ ಕಾಮಗಾರಿ ವೇಳೆ ಹೈಟೆನ್ಶನ್ ತಂತಿ ತಗಲಿ ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಕೋಟೆಕಾರು ಬೀರಿ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.ಈ ಘಟನೆಯಲ್ಲಿ ಇನ್ನೋರ್ವ ಯುವಕ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಕೊಣಾಜೆ ಅಡ್ಕರೆಪಡ್ಪು ನಿವಾಸಿ ಹಸೈನಾರ್ ಎಂಬವರ ಪುತ್ರ ಉಸ್ಮಾನ್ (20) ಮೃತ ದುರ್ದೈವಿ. ಇನ್ನು ಕೊಣಾಜೆ ತಿಬ್ಲೆಪದವಿನ ಶರೀಫ್ (25) ಗಾಯಗೊಂಡಿದ್ದು ದೇರಳಕಟ್ಟೆಯ ಯೆನೆಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಖಲೀಲ್ ಎಂಬವರು ಗುತ್ತಿಗೆ ಪಡೆದುಕೊಂಡಿದ್ದ ಕೋಟೆಕಾರು ಬೀರಿ ಸಮೀಪ ಬೋರ್ ವೆಲ್ ಪೈಪ್ ಹೊರತೆಗೆಯುವ ಕಾಮಗಾರಿಯಲ್ಲಿ 6 ಮಂದಿ ಕಾರ್ಮಿಕರು ನಿರತರಾಗಿದ್ದರು. ಈ ಸಂದರ್ಭ ಸುಮಾರು ನಾಲ್ಕು ಪೈಪುಗಳನ್ನು ಮೇಲಕ್ಕೆತ್ತಿದ್ದ ಉಸ್ಮಾನ್ ಮತ್ತು ಶರೀಫ್, ಐದನೇ ಪೈಪನ್ನು ಮೇಲಕ್ಕೆತ್ತುವ ಸಂದರ್ಭ ಪೈಪಿಗೆ ಮೇಲಿದ್ದ ಹೈಟೆನ್ಶನ್ ತಂತಿಗೆ ತಗುಲಿದ ಪರಿಣಾಮ ಶರೀಫ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನೋರ್ವ ಗಾಯಾಳು ಶರೀಫ್ ರನ್ನು ನಂತರ ಆಸ್ಪತ್ರೆಗೆ ಸೇರಿಸಲಾಗಿದೆ.ಮೃತ ಉಸ್ಮಾನ್ ಪೋಷಕರಿಗೆ ಓರ್ವನೇ ಪುತ್ರನಾಗಿದ್ದ. 9 ನೇ ತರಗತಿ ಮುಗಿಸಿದ ಬಳಿಕ ಮನೆಯಲ್ಲೇ ಉಳಿದುಕೊಂಡಿದ್ದ ಈತ ಕೂಲಿ ಕೆಲಸ ಇದ್ದಲ್ಲಿ ಮಾತ್ರ ತೆರಳುತ್ತಿದ್ದ. ಇತ್ತೀಚೆಗೆ ಹಲವು ಸಮಯಗಳಿಂದ ಮನೆಯಲ್ಲೇ ಉಳಿದುಕೊಂಡಿದ್ದಾತ ಬುಧವಾರದಂದು ಖಲೀಲ್ ಜತೆಗೆ ಬೋರ್ ವೆಲ್ ಪೈಪ್ ಹಿಂತೆಗೆಯುವ ಕಾಮಗಾರಿಯಲ್ಲಿ ಕೈಜೋಡಿಸಿಕೊಂಡಿದ್ದ. ಇದೀಗ ಆತ ಇಹಲೋಕವನ್ನೇ ತ್ಯಜಿಸಿದ್ದಾನೆ.ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರೆ, ಗುತ್ತಿಗೆದಾರ ಖಲೀಲ್ ತಲೆಮರೆಸಿಕೊಂಡಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here