ಮಂಗಳೂರು: ಯೇಸು ಕ್ರಿಸ್ತರು ತಮ್ಮ ಕೊನೆಯ ಭೋಜನದ ವೇಳೆ 12 ಮಂದಿ ಶಿಷ್ಯರ ಪಾದ ತೊಳೆದು ಸೇವೆಯ ಸಂಸ್ಕಾರ ಪ್ರತಿಪಾದಿಸಿದುದರ ಸಂಕೇತವಾಗಿ ಕ್ರೈಸ್ತ ಚರ್ಚ್ಗಳಲ್ಲಿ ಗುರುವಾರ ಸಂಜೆ ಧರ್ಮಗುರು 12 ಜನ ಕ್ರೈಸ್ತರ ಪಾದಗಳನ್ನು ತೊಳೆದರು. ಮಂಗಳೂರಿನ ರೊಜಾರಿಯೋ ಕೆಥೆಡ್ರಲ್ನಲ್ಲಿ ಬಿಷಪ್ ರೆ| ಡಾ| ಅಲೋಶಿಯಸ್ ಪಾಪ್ಲಾ ಡಿ'ಸೋಜಾ ಪ್ರಕ್ರಿಯೆ ನಡೆಸಿದರು. ಮಂಗಳೂರಿನಲ್ಲಿ 6 ಪುರುಷರು, 6 ಮಹಿಳೆಯರು, ಪಾದ ತೊಳೆಯಲಾಯಿತು. ಮಹಿಳೆಯರಿಗೂ ಸಮಾನ ಸ್ಥಾನಮಾನ ನೀಡಬೇಕು ಎಂದು ಪೋಪ್ ಫ್ರಾನ್ಸಿಸ್ ಅವರ ಆದೇಶದಂತೆ ಕಳೆದ ವರ್ಷದಿಂದ ಈ ಬದಲಾವಣೆ ಮಾಡಲಾಗಿತ್ತು.
ಮಹಿಳೆಯರಿಗೆ ಸ್ಥಾನಮಾನ ಕಲ್ಪಿಸುವಾಗ ಯುವಜನರಿಗೆ, ವಯಸ್ಕರಿಗೆ, ರೋಗಿಗಳಿಗೆ ಹಾಗೂ ಧಾರ್ಮಿಕ ವ್ಯಕ್ತಿಗಳಿಗೂ ಪ್ರಾತಿನಿಧ್ಯ ನೀಡಲಾಗಿದ್ದು, ಅದರಂತೆ ಧರ್ಮ ಭಗಿನಿಯರೂ ಭಾಗವಹಿಸಿದ್ದರು.