ಮಂಗಳೂರು: ಉಜಿರೆಯ ಎಸ್ ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ಗೆ ಸಿಬಿಐ ವಿಶೇಷ ನ್ಯಾಯಾಲಯ ಗುರುವಾರ ಜಾಮೀನು ಮುಂಜೂರು ಮಾಡಿದೆ.
ಈಗಾಗಲೇ ಪ್ರಕರಣ ಸಂಬಂಧ 4 ವರ್ಷ ಜೈಲು ಶಿಕ್ಷೆ ಪೂರೈಸಿರುವ ಆರೋಪಿ ಸಂತೋಷ್ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸಿಬಿಐ ಸಿಬಿಐ ಕೋರ್ಟ್ 1ಲಕ್ಷ ರೂ. ಶ್ಯೂರಿಟಿ ಬಾಂಡ್, ತನಿಖೆಗೆ ಸಹಕರಿಸಬೇಕು, ನ್ಯಾಯಾಲಯದ ವ್ಯಾಪ್ತಿ ಬಿಟ್ಟು ತೆರಳಬಾರದು ಎಂದು ಇತರೆ ಷರತ್ತುಗಳನ್ನು ವಿಧಿಸಿ ಜಾಮೀನು ನೀಡಿದೆ.ಅಕ್ಟೊಬರ್ 10 2012 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೌಜನ್ಯ ಧರ್ಮಸ್ಥಳ ಸಮೀಪದ ಉಜಿರೆಯಲ್ಲಿ ಶವವಾಗಿ ಪತ್ತೆಯಾಗಿದ್ದಳು, ನಂತರ ಪ್ರಕರಣವನ್ನು ಸಿಐಡಿ ತನಿಖೆಗೆ ನೀಡಲಾಗಿತ್ತು.