ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ ದಾಮೋದರ ದಾಸ್ ಮೋದಿ ಅವರು ಸೋಮವಾರದಂದು ಮಂಗಳೂರಿಗೆ ಆಗಮಿಸಿ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸೋಮವಾರ ಸಂಜೆ ೪.೧೫ಕ್ಕೆ ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.
ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಎ.ಜೆ.ಶೆಟ್ಟಿ, ಸದಸ್ಯರಾದ ಸುರೇಶ್, ದಿನೇಶ್, ಮಾಜಿ ಸದಸ್ಯ ಪ್ರದೀಪ್ ಕುಮಾರ್ ಕಲ್ಕೂರ ಉಪಸ್ಥಿತರಿದ್ದರು. ಬಳಿಕ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು. ಕ್ಷೇತ್ರ ಅಧ್ಯಕ್ಷ ಎಚ್.ಎಸ್. ಸಾಯಿರಾಂ ಉಪಸ್ಥಿತರಿದ್ದರು. ಪ್ರಹ್ಲಾದ ದಾಮೋದರ ದಾಸ್ ಮೋದಿ ಅವರು ಕುಟುಂಬ ಸಮೇತ ತೀರ್ಥ ಯಾತ್ರೆಯಲ್ಲಿದ್ದು, ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಜಿ ಶಾಸಕ ಎನ್. ಯೋಗಿಶ್ ಭಟ್, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ನಾಯಕರಾದ ನಿತಿನ್ ಕುಮಾರ್ ರವಿಶಂಕರ ಮಿಜಾರು ಮೊದಲಾದವರು ಉಪಸ್ಥಿತರಿದ್ದರು.