ಮಂಗಳೂರು: ಅಹ್ಮದ್ ಖುರೇಶಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ ರಾಜ್ಯ ಸರ್ಕಾರ ಆದಿತ್ಯವಾರ ಆದೇಶ ಹೊರಡಿಸಿದೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜಾ ಹೇಳಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆ ಯತ್ನ ಪ್ರಕರಣದ ಆರೋಪಿಯಾಗಿರುವ ಕಾಟಿಪಳ್ಳದ ಅಹ್ಮದ್ ಖುರೇಶಿಯನ್ನು ಪೊಲೀಸರು ತಮ್ಮ ಕಸ್ಟಡಿಯಲ್ಲಿಟ್ಟು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಕೆಲವು ಸಂಘಟನೆಗಳು ಮುಖ್ಯಮಂತ್ರಿ ಮತ್ತು ಗೃಹಸಚಿವರಿಗೆ ಮನವಿ ಸಲ್ಲಿಸಿ ತನಿಖೆಗೆ ಆಗ್ರಹಿಸಿದ್ದವು.
ಇದೀಗ ಗೃಹ ಇಲಾಖೆ ಈ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಸಿಐಡಿಗೆ ಸೂಚಿಸಿದೆ. ಸಿಐಡಿ ಆಧಾರದಲ್ಲಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಅವರು ವಿವರಿಸಿದರು