Thursday 8th, May 2025
canara news

ರಾಜ್ಯ ಸರ್ಕಾರದಿಂದ ದಕ್ಷಿಣ ಕನ್ನಡ ಕಾರ್ಮಿಕರಿಗೆ ಸಿಹಿ ಸುದ್ದಿ!

Published On : 19 Apr 2017   |  Reported By : Canaranews Network


ಮಂಗಳೂರು: ಮಂಗಳೂರು ಕಾರ್ಮಿಕರಿಗೆ ಮೇ 1 ರ ಕಾರ್ಮಿಕರ ದಿನದಂದು ಒಂದೊಳ್ಳೆ ಉಡುಗೊರೆ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಹೌದು. ಕರಾವಳಿಗೊಂದು ಕಾರ್ಮಿಕರ ಭವನ ನಿರ್ಮಿಸಬೇಕೆಂಬ ಅನೇಕ ವರ್ಷಗಳಿಂದ ಕೇಳಿ ಬರುತ್ತಿದ್ದ ಕೂಗಿಗೆ ಕೊನೆಗೂ ರಾಜ್ಯ ಸರ್ಕಾರ ಕಿವಿಗೊಟ್ಟಿದೆ.

ಕಾರ್ಮಿಕ ಭವನ ನಿರ್ಮಿಸೋಕೇ ಆದೇಶ ನೀಡುವುದರ ಜತೆಗೆ 2.50 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇರುವ ಜಿಲ್ಲಾ ಕಾರ್ಮಿಕ ಕಲ್ಯಾಣ ಇಲಾಖೆಗೆ ಸ್ವಂತ ಕಟ್ಟಡವಿಲ್ಲದೆ 1 ಲಕ್ಷ ಬಾಡಿಗೆ ಕೊಟ್ಟು ಈ ಕಚೇರಿ ಕಾರ್ಯನಿರ್ವಹಿಸುತ್ತಿದೆ.

ಈ ಕುರಿತು ಮಾತನಾಡಿದ ಮುಖ್ಯ ಸಚೇತಕ ಐವನ್ ಡಿಸೋಜಾ, 'ಮಂಗಳೂರಿನ ಕದ್ರಿಯಲ್ಲಿ ಕಾರ್ಮಿಕರ ಭವನ ನಿರ್ಮಾಣವಾಗಲಿದೆ. ಮೇ 1ರಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಈ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದು ರಾಜ್ಯದ ಏಳನೇ ಭವನವಾಗಲಿದೆ' ಎಂದರು




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here