ಮಂಗಳೂರು: ವಾಹನ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ನಗರದ ೧೧ ಕಡೆಗಳಲ್ಲಿ ಸುಸಜ್ಜಿತ ಬಸ್ ಬೇ ನಿರ್ಮಾಣ ಮಾಡಲು ಮಹಾನಗರ ಪಾಲಿಕೆ ಉದ್ದೇಶಿಸಿದೆ.
ಈ ಸಂಬಂಧ ಮೇಯರ್ ಕವಿತಾ ಸನಿಲ್ ಅವರ ನೇತೃತ್ವದಲ್ಲಿ ಶಾಸಕ ಜೆ.ಆರ್. ಲೋಬೋ, ಉಪಮೇಯರ್ ರಜನೀಶ್, ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರವೂಫ್, ಆಯುಕ್ತ ಮೊಹಮ್ಮದ್ ನಝೀರ್ ಅವರು ಇತ್ತೀಚೆಗೆ ಸ್ಥಳ ಸಮೀಕ್ಷೆ ನಡೆಸಿದ್ದಾರೆ. ಪ್ರಮುಖ ೧೧ ಸ್ಥಳಗಳಲ್ಲಿ ಬಸ್ ಬೇ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.