ಮಂಗಳೂರು: ಕೆಪಿಸಿಸಿ ಅಧ್ಯಕ್ಷರು ಸಚಿವ ಸಂಪುಟಕ್ಕೆ ಬಂದ ತಕ್ಷಣ ಆ ಸ್ಥಾನಕ್ಕೆ ಹೊಸಬರ ನೇಮಕ ಆಗಬೇಕಿತ್ತು. ಆ ಪ್ರಕ್ರಿಯೆ ಪ್ರಸ್ತುತ ನಡೆಯುತ್ತಿದೆ ಎಂದು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಹೇಳಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ವಿವಿಧ ಕಾರಣಗಳಿಂದ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ ವಿಳಂಬ ಆಗಿರಬಹುದು.ಬದಲಾವಣೆಯಂತೂ ಈ ಬಾರಿ ಆಗುವುದು ಖಂಡಿತ. ಇನ್ನು,ಇತ್ತೀಚಿನ ಉಪಚುನಾವಣೆಯಲ್ಲಿ ಜನತೆ ತಮ್ಮ ಅಭಿಪ್ರಾಯವನ್ನು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಬಹಿರಂಗ ಪಡಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಇದೇ ಮಾದರಿಯ ಅಭಿಪ್ರಾಯ ಜನರಿಂದ ವ್ಯಕ್ತವಾಗಲಿದೆ ಎಂದವರು ಹೇಳಿದರು.