Friday 19th, April 2024
canara news

ಮಂಗಳೂರಿನಲ್ಲಿ ಗ್ರಾಪಂ ಉಪಾಧ್ಯಕ್ಷನ ಬರ್ಬರ ಹತ್ಯೆ

Published On : 20 Apr 2017   |  Reported By : Canaranews Network


ಮಂಗಳೂರು: ಗ್ರಾಮ ಪಂಚಾಯತ್ ಕಚೇರಿಗೆ ನುಗ್ಗಿ ಬೆಳ್ಳಂಬೆಳಗ್ಗೆ ಗ್ರಾಪಂ ಉಪಾಧ್ಯಕ್ಷ ಜಲೀಲ್ ಕರೋಪಾಡಿ ಅವರನ್ನು ನಾಲ್ವರು ಮುಸುಕುಧಾರಿಗಳು ಮಚ್ಚಿನಿಂದ ಥಳಿಸಿ ಹತ್ಯೆಗೈದ ಘಟನೆ ಮಂಗಳೂರಿನ, ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಜಲೀಲ್ ಕರೋಪಾಡಿ, ಬಂಟ್ವಾಳ ತಾ.ಪಂ. ಹಿರಿಯ ಸದಸ್ಯ ಉಸ್ಮಾನ್ ಕರೋಪಾಡಿಯವರ ಪುತ್ರನಾಗಿದ್ದು, ಈ ಹಲ್ಲೆಗೆ ಸ್ಪಷ್ಟ ಕಾರಣಗಳಿನ್ನೂ ತಿಳಿದುಬಂದಿಲ್ಲ.ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಲೀಲ್ ಅವರನ್ನು ದೇರಳಕಟ್ಟೆಯ ಕಣಚೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.ಇವರನ್ನು ಹತ್ಯೆಗೈದ ಮುಸುಕುಧಾರಿಗಳು ಕೇರಳ ಗಡಿ ಭಾಗದ ದುಷ್ಕರ್ಮಿಗಳು ಎಂದು ಶಂಕಿಸಲಾಗಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here