ಮಂಗಳೂರು: ಮಂಗಳೂರು ಹೊರವಲಯದ ಉಳ್ಳಾಲದ ಕುತ್ತಾರು ಎಂಬಲ್ಲಿ ಶುಕ್ರವಾರ ಬೆಳಗ್ಗೆ ಮೂವರು ಕಾರ್ಮಿಕರ ನಡುವೆ ಜಗಳ ನಡೆದಿದ್ದು ಈ ವೇಳೆ ಒಬ್ಬಾತ ಇಬ್ಬರಿಗೆ ಚೂರಿ ಇರಿದು ಪರಾರಿಯಾಗಿದ್ದಾನೆ.
ಬಿಹಾರ ಮೂಲದ ನಿತೇಶ್ ಮತ್ತು ಪ್ರದೀಪ್ ಎನ್ನುವ ಕಾರ್ಮಿಕರು ಇರಿತಕ್ಕೊಳಗಾಗಿದ್ದು, ಒಡಿಶಾ ಮೂಲದ ತಾಹಿರ್ ಇರಿದು ಪರಾರಿಯಾಗಿದ್ದಾನೆ. ಗಾಯಾಳುಗಳಿಬ್ಬರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.