Thursday 7th, December 2023
canara news

ಸಮುದ್ರಪಾಲಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

Published On : 25 Apr 2017   |  Reported By : Canaranews Network


ಮಂಗಳೂರು; ಮೈಯಲ್ಲಿ ಹುಣ್ಣು ಇದ್ದ ಕಾರಣ ಉಪ್ಪು ನೀರಿನ ಸ್ನಾನಕ್ಕೆಂದು ಸಮುದ್ರಕ್ಕಿಳಿದಿದ್ದ ವೇಳೆ ಸಮುದ್ರಪಾಲಾಗಿದ್ದ ಯುವಕನ ಮೃತದೇಹವನ್ನು ತಣ್ಣೀರುಬಾವಿ ಮುಳುಗು ತಜ್ಞರ ತಂಡ ಮೇಲಕ್ಕೆತ್ತಿದೆ.ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಸೀಗ್ರೌಂಡ್ ಬಳಿ ರವಿವಾರ ಮಾಸ್ತಿಕಟ್ಟೆ ನಿವಾಸಿ ಮಹಮ್ಮದ್ ಹನೀಫ್ (31) ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ಸಂಜೆಯವರೆಗೆ ಹನೀಫ್ ಪತ್ತೆಯಾಗದಿರುವುದನ್ನು ಗಮನಿಸಿದ ಉಳ್ಳಾಲ ಪೊಲೀಸರು ತಣ್ಣಿರು ಬಾವಿ ಮುಳುಗು ತಜ್ಞರನ್ನು ಕರೆಸಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ. ಕೋಟೆಪುರ, ಮೊಗವೀರಪಟ್ಣ, ಮುಕ್ಕಚ್ಚೇರಿಯಿಂದ ಮೀನುಗಾರರು, ಈಜುಗಾರರು ಆಗಮಿಸಿ ಶೋಧಕಾರ್ಯಕ್ಕೆ ಸಹಕರಿಸಿದ್ದರು.

ಸಚಿವ ಖಾದರ್ ಭೇಟಿ: ಸಚಿವ ಯು.ಟಿ. ಖಾದರ್ ಶೋಧಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ ವೀಕ್ಷಿಸಿದರು. ಉಳ್ಳಾಲ ಇನ್ಸ್ಪೆಕ್ಟರ್ ಗೋಪಿಕೃಷ್ಣ, ಎಸ್ಐಗಳಾದ ರಾಜೇಂದ್ರ, ಪ್ರಕಾಶ್ ಆಗಮಿಸಿದ್ದರು. ಅಗ್ನಿಶಾಮಕದಳ ಶೋಧಕಾರ್ಯದಲ್ಲಿ ತೊಡಗಿಸಿಕೊಂಡಿಸಿತ್ತು.ವೃತ್ತಿಯಲ್ಲಿ ಪೈಂಟರಾಗಿದ್ದ ಹನೀಫ್ ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅವರು ಬಡಕುಟುಂಬದವರಾಗಿದ್ದು ಮನೆಗೆ ಆಧಾರಸ್ತಂಭವಾಗಿದ್ದರು




More News

ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ

Comment Here