ಮಂಗಳೂರು: ಮಕ್ಕಳ ಜೀವಕ್ಕೆ ಅಪಾಯಕಾರಿಯಾಗುತ್ತಿರುವ ತೆರೆದ ಬೋರ್ ವೆಲ್ ಗಳು ಕಂಡು ಬಂದಲ್ಲಿ ಸಾರ್ವಜನಿಕರು ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಅಥವಾ ಎಸ್ ಎಂಎಸ್ ಅಥವಾ ವ್ಯಾಟ್ಯಾಪ್( ೯೪೮೦೮೦೫೩೦೦) ಮೂಲಕ ಮಾಹಿತಿ ನೀಡಬೇಕೆಂದು ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಮನವಿ ಮಾಡಿದ್ದಾರೆ.
ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು, ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಬೋರ್ ವೆಲ್ ಮುಚ್ಚಲು ಹಾಗೂ ಬೋರ್ ವೆಲ್ ಮಾಲಕರಿಗೆ ನೋಟಿಸ್ ನೀಡುವ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.