Thursday 28th, March 2024
canara news

ಮಂಗಳೂರಿನಲ್ಲಿ ಅಗ್ರಿಗೋಲ್ಡ್ ಗ್ರಾಹಕರು, ಏಜೆಂಟರ ಪ್ರತಿಭಟನೆ

Published On : 27 Apr 2017   |  Reported By : Canaranews Network


ಮಂಗಳೂರು: ರಾಜ್ಯದ 8.5 ಲಕ್ಷ ಅಗ್ರಿಗೋಲ್ಡ್ ಗ್ರಾಹಕರಿಗೆ ನ್ಯಾಯ ಒದಗಿಸಿ ಕೊಡಬೇಕು. ಅವರು ಹೂಡಿದ ಮೊತ್ತವನ್ನು ಹಿಂದಿರುಗಿಸಬೇಕು.ಗ್ರಾಹಕರು ಮತ್ತು ಏಜೆಂಟ್ಗಳಿಗೆ ಭದ್ರತೆ ಒದಗಿಸಬೇಕು ಎಂದು ಬಿಎಂಎಸ್ ಸಂಯೋಜಿತ ಅಗ್ರಿಗೋಲ್ಡ್ ಗ್ರಾಹಕರು ಮತ್ತು ಏಜೆಂಟರ ಕ್ಷೇಮಾಭಿವೃದ್ಧಿ ಸಂಘದ ರಾಷ್ಟ್ರೀಯ ಅಧ್ಯಕ್ಷ ಅಂಡಾಲ ರಮೇಶ್ಬಾಬು ಆಗ್ರಹಿಸಿದ್ದಾರೆ.

ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಂಗಳವಾರ ನಡೆದ ಗಾಹಕರು ಮತ್ತು ಏಜೆಂಟರ ಪ್ರತಿಭಟನ ಸಭೆಯಲ್ಲಿ ಅವರು ಮಾತನಾಡಿದರು.ಈ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದರು. ಮೂರು ವರ್ಷಗಳಿಂದ ಬಾಕಿ ಅಗ್ರಿಗೋಲ್ಡ್ ಸಂಸ್ಥೆ ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ, ಒಡಿಶಾ, ತಮಿಳುನಾಡು, ಛತ್ತೀಸ್ಗಢ, ಅಂಡಮಾನ್ ನಿಕೋಬಾರ್ಗಳಲ್ಲಿ 32 ಲಕ್ಷ ಗ್ರಾಹಕರಿಂದ 8 ಲಕ್ಷ ಏಜೆಂಟರ ಮೂಲಕ 7 ಸಾವಿರ ಕೋಟಿ ರೂ. ಸಂಗ್ರಹಿಸಿದೆ.

ಮೆಚೂರಿಟಿ ಅವಧಿ ಮುಗಿದರೂ ಕಳೆದ ಮೂರು ವರ್ಷಗಳಿಂದ ಗ್ರಾಹಕರ ಹಣವನ್ನು ಹಿಂದಿರುಗಿಸಿಲ್ಲ ಎಂದು ರಮೇಶ್ ಬಾಬು ಹೇಳಿದರು.ಈ ವೇಳೆ ಜಿಲ್ಲಾಧಿಕಾರಿ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

 

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here