ಮಂಗಳೂರು: ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಹೊಟೇಲ್ ಕಟ್ಟಡದ 6 ನೇ ಮಹಡಿಯಿಂದ ಜಿಗಿದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ. ನಿಹಾಲ್ ಭಂಡಾರಿ ಎಂಬ ಯುವಕ ಆತ್ಮಹತ್ಯೆ ಮಾಡಿಕೊಂಡವನಾಗಿದ್ದು, ಪಂಪ್ವೆಲ್ ನಿವಾಸಿ ಎಂದು ತಿಳಿದು ಬಂದಿದೆ.
ಈತ ಹೊಟೇಲ್ನಲ್ಲಿ ಕ್ಯಾಶಿಯರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕದ್ರಿ ಪೊಲೀಸರು ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.