Saturday 27th, July 2024
canara news

ಮೇ ತಿಂಗಳಲ್ಲಿ ಸೋಲಾರ್ ಸಾಲ ಮೇಳ: ಐವನ್

Published On : 29 Apr 2017   |  Reported By : Canaranews Network


ಮಂಗಳೂರು: ಸೌರ ವಿದ್ಯುತ್ ಬಳಕೆ ಕುರಿತಂತೆ ಅಭಿಯಾನವನ್ನು ನಡೆಸುತ್ತಿರುವ ವಿಧಾನ ಪರಿಷತ್ನ ಮುಖ್ಯ ಸಚೇತಕ ಐವನ್ ಡಿ'ಸೋಜಾ ಅವರು ದಕ್ಷಿಣ ಕನ್ನಡವನ್ನು ಸೋಲಾರ್ಯುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಮೇ ತಿಂಗಳಲ್ಲಿ ವಿವಿಧ ಬ್ಯಾಂಕುಗಳು, ಮೆಸ್ಕಾಂ ಮತ್ತು ಸೌರ ವಿದ್ಯುತ್ ಉಪಕರಣ ಉತ್ಪಾದಕರು/ ಪೂರೈಕೆದಾರರನ್ನು ಸೇರಿಸಿಕೊಂಡು ಸೋಲಾರ್ ಸಾಲ ಮೇಳವನ್ನು ನಡೆಸಲು ತೀರ್ಮಾನಿಸಿದ್ದಾರೆ.

ಸೌರ ವಿದ್ಯುತ್ಗೆ ಜಿಲ್ಲೆಯಲ್ಲಿ ಬ್ಯಾಂಕುಗಳು ಒದಗಿಸುತ್ತಿರುವ ಸಾಲ ಮತ್ತು ಇತರ ಪ್ರೋತ್ಸಾಹಕ ಕ್ರಮಗಳ ಕುರಿತು ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಮತ್ತು ಮೆಸ್ಕಾಂ ಅಧಿಕಾರಿಗಳ ಜತೆ ಗುರುವಾರ ತನ್ನ ಕಚೇರಿಯಲ್ಲಿ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಲಾಗಿದೆ. ಎಲ್ಲ ಬ್ಯಾಂಕುಗಳು ಸಾಲ ನೀಡಲು ಒಪ್ಪಿಕೊಂಡಿವೆ ಎಂದು ಐವನ್ ಡಿ'ಸೋಜಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 




More News

ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಪ್ರೊ| ಪಿ.ಎಲ್ ಧರ್ಮ ಅವರಿಗೆ ೨೦೨೪ ವರ್ಷದ ಅತ್ಯುತ್ತಮ ಪಬ್ಲಿಕ್ ರಿಲೇಶನ್ ವ್ಯಕ್ತಿ ಗೌರವ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಗೋಪಾಲಕೃಷ್ಣ ಪಬ್ಲಿಕ್ ಟ್ರಸ್ಟ್, ಗೋಕುಲ ಆಷಾಢ ಏಕಾದಶಿ ಪರ್ವ ದಿನ ಆಚರಣೆ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ
ಐಲೇಸಾ ದಿ ವಾಯ್ಸ್ ಆಫ್ ಓಷನ್(ರಿ) ಸಂಸ್ಥೆಯಿ0ದ ನಂದಾದೀಪ ಸಂದೀಪ ಕಾರ್ಯಕ್ರಮ

Comment Here