Friday 26th, April 2024
canara news

ಕೌಟುಂಬಿಕ ವೈಷ್ಯಮ್ಯದಿಂದ ಕಾರ್ತಿಕ್ ಕೊಲೆ; ಕಮಿಷನರ್

Published On : 30 Apr 2017   |  Reported By : Canaranews Network


ಮಂಗಳೂರು: ಮಂಗಳೂರು ಹೊರವಲಯದ ಕೊಣಾಜೆ ಠಾಣಾ ವ್ಯಾಪ್ತಿಯ ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕಾರ್ತಿಕ್ ರಾಜ್ ಸಹೋದರಿ ಕಾವ್ಯಾಶ್ರಿ ಹಾಗೂ ಪಂಡಿತ್ ಹೌಸ್ ನ ಸಂತೋಷ್ ನಗರ ನಿವಾಸಿ ಗೌತಮ್ ಹಾಗೂ ಆತನ ಸಹೋದರ ಗೌರವ್ ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಇದೊಂದು ತೀರಾ ಸಂಕೀರ್ಣ ಹಾಗೂ ಕುರುಡು ಪ್ರಕರಣವಾಗಿತ್ತು. ಪ್ರಕರಣವನ್ನು ಭೇದಿಸುವುದು ಸವಾಲಿನ ಕಾರ್ಯವಾಗಿದ್ದು, ಸಿಸಿಆರ್ ಬಿ ಎಸಿಪಿ ವೆಲೆಂಟೈನ್ ಡಿಸೋಜಾ ನೇತೃತ್ವದ ವಿಶೇಷ ತಂಡವು ಪ್ರಕರಣವನ್ನು ಭೇಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಮಾಹಿತಿ ನೀಡಿದರು.

ಪ್ರಕರಣ ಭೇಧಿಸಿದ ತಂಡಕ್ಕೆ ಬಹುಮಾನ

ಈ ಕೊಲೆ ಪ್ರಕರಣವನ್ನು ಭೇಧಿಸಿದ ತಂಡಕ್ಕೆ ಪೊಲೀಸ್ ಆಯುಕ್ತ ಚಂದ್ರಶೇಖರ್ ಅವರು, ೨೫, ೦೦೦ ರೂಪಾಯಿಗಳ ಬಹುಮಾನವನ್ನು ಘೋಷಿಸಿದರು. ಆರೋಪಿಗಳ ಪತ್ತೆ ಕಾರ್ಯದಲ್ಲಿ ವೆಲೆಂಟೈನ್ ಡಿಸೋಜಾ, ದಕ್ಷಿಣ ಉಪ ವಿಭಾಘದ ಎಸಿಪಿ ಶೃತಿ, ಕೊಣಾಜೆ ಪೊಲೀಸ್ ನಿರೀಕ್ಷಕ ಅಶೋಕ್, ಸಿಬ್ಬಂದಿಗಳಾದ ಸುನೀಲ್ ಕುಮಾರ್, ದಾಮೋದರ, ರಿಜಿ ಪಿ.ಎಂ, ಸುಧೀರ್ ಶೆಟ್ಟಿ, ಮನೋಜ್ ಕುಮಾರ್, ಮುಹಮ್ಮದ್ ಇಕ್ಬಾಲ್ ಭಾಗವಹಿಸಿದ್ದರು ಎಂದು ಆಯುಕ್ತರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಶಾಂತರಾಜು, ಡಾ. ಸಂಜೀವ ಪಾಟೀಲ್, ಎಸಿಪಿಗಳಾದ ಶೃತಿ, ವೆಲೆಂಟೈನ್ ಡಿಸೋಜಾ ಉಪಸ್ಥಿತರಿದ್ದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here