ಕುಂದಾಪುರ: ಕುಂದಾಪುರ ದೇವಾಡಿಗರ ಸಮಾಜ ಸೇವಾ ಸಂಘ(ರಿ) ಇವರ ಮಹಿಳಾ ಘಟಕದಿಂದ ಭಜನಾ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಕುಂದಾಪುರದ ರಾಘವೇಂದ್ರ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಯಿತು.
ಕುಂದಾಪುರದ ಸಿದ್ದಿವಿನಾಯಕ ಭಜನಾ ಮಂಡಳಿಯ ಸದಸ್ಯರಾದ ಶೋಭಾ ಶೆಣೈ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಮುಂಬೈ ಉದ್ಯಮಿ ಸುರೇಶ ಡಿ ಪಡುಕೋಣೆ, ಸಿದ್ದಿವಿನಾಯಕ ಭಜನಾ ಮಂಡಳಿಯ ಸದಸ್ಯೆ ವಸಂತಿ ಪಂಡಿತ,ದೇವಾಡಿಗರ ಸಮಾಜ ಸೇವಾ ಸಂಘದ ಅಧ್ಯಕ್ಷ ನಾಗರಾಜ ರಾಯಪ್ಪನಮಠ, ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು
ಸಂಸ್ಥೆಯ ಕಾರ್ಯದರ್ಶಿ ಉದಯ ಹೇರಿಕೇರಿ ಕಾರ್ಯಕ್ರಮ ನಿರೂಪಿಸಿ,ಮಾಜಿ ಅಧ್ಯಕ್ಷ ದಿನೇಶ್ ವಿ ದೇವಾಡಿಗ ವಂದಿಸಿದರು