Thursday 7th, December 2023
canara news

ನಿರ್ಧಿಷ್ಟ ಸಮುದಾಯದ ಮೇಲೆ ಗೂಬೆ ಕೂರಿಸಲು ಪ್ರಯತ್ನಿಸಿದ್ದ ಯಡಿಯೂರಪ್ಪ ಕ್ಷಮೆ ಕೇಳಲಿ; ಸಚಿವ ಖಾದರ್

Published On : 01 May 2017   |  Reported By : Canaranews Network


ಮಂಗಳೂರು: ಮಂಗಳೂರು ಹೊರವಲಯದ ಪಜೀರು ಸುದರ್ಶನ ನಗರದ ನಿವಾಸಿ ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿಗಳನ್ನು ಬಂಧಿಸಿರುವ ಪೊಲೀಸರನ್ನು ಸಚಿವ ಯು.ಟಿ.ಖಾದರ್ ಅಭಿನಂದಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಯು.ಟಿ.ಖಾದರ್, ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಮಂಗಳೂರಿಗೆ ಆಗಮಿಸಿದ್ದಾಗ ಈ ಕಾರ್ತಿಕ್ ರಾಜ್ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿ ಒಂದು ನಿರ್ಧಿಷ್ಟ ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದರು.

ಅವರು ಈ ಬಗ್ಗೆ ಕ್ಷಮೆ ಯಾಚಿಸಬೇಕೆಂದು ಹೇಳಿದರು. ಕಾರ್ತಿಕ್ ರಾಜ್ ಕೊಲೆ ಪ್ರಕರಣಕ್ಕೆ ಅಲ್ಲಿನ ಸ್ಥಳೀಯ ಇನ್ಸ್ ಪೆಕ್ಟರ್ ಸರಿಯಾದ ರೀತಿಯಲ್ಲಿ ತನಿಖೆ ನಡೆಸಿಲ್ಲ ಎನ್ನುವುದು ಕಂಡುಬರುತ್ತದೆ. ಈ ಬಗ್ಗೆ ಕಮಿಷನರ್ ತನಿಖೆ ಮಾಡಬೇಕು ಎಂದು ಹೇಳಿದರು. 




More News

ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಹಳೆ ವಿದ್ಯಾರ್ಥಿಗಳ ಸಂಘ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಪೆರ್ಮಂಕಿಗುತ್ತು ರಿತೇಶ್ ಪಕ್ಕಳ ಅವರಿಗೆ ಪಿಹೆಚ್‍ಡಿ ಪದವಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ
ಇಪ್ಪತ್ತ್ತರನೇ ವಾರ್ಷಿಕ ಮಹಾಸಭೆ ಪೂರೈಸಿದ ಗಾಣಿಗ ಸಮಾಜ ಮುಂಬಯಿ

Comment Here