Friday 9th, May 2025
canara news

ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

Published On : 01 May 2017   |  Reported By : Canaranews Network


ಮಂಗಳೂರು: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಮೈಸೂರು ಮೂಲದ ಇಬ್ಬರು ವ್ಯಕ್ತಿಗಳನ್ನು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮೈಸೂರಿನ ಮೇಟಿಗಹಳ್ಳಿ ನಿವಾಸಿ ಸಂತೋಷ್(೨೨) ಮತ್ತು ಮೈಸೂರು ಶಾರದಾ ದೇವಿ ನಗರದ ನಂದಕುಮಾರ್(೨೦) ಎಂದು ಗುರುತಿಸಲಾಗಿದೆ..

ಆರೋಪಿಗಳು ಶುಕ್ರವಾರ ಸಂಜೆ ಮೂಡಬಿದಿರೆ ಪೇಟೆಯಲ್ಲಿ ಬೈಕ್ ನಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದಾಗ ಗಸ್ತಿನಲ್ಲಿ ಇನ್ಸ್ ಪೆಕ್ಟರ್ ರಾಮಚಂದ್ರ ನಾಯಕ್ ಮತ್ತು ಸಿಬ್ಬಂದಿಗಳು ನಿಲ್ಲಿಸಿ ವಿಚಾರಣೆ ನಡೆಸಿದಾಗ ಆರೋಪಿಗಳು ತಮ್ಮ ಪರಿಚಯಸ್ಥ ವಿದ್ಯಾರ್ಥಿಗಳು ಮತ್ತು ಇತರ ಕೆಲ ವ್ಯಕ್ತಿಗಳಿಗೆ ಗಾಂಜಾ ಮಾರಾಟ ಮಾಡಲು ಹೊಂಚು ಹಾಕುತ್ತಿದ್ದರೆನ್ನಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಮುಂದಿನ ಕ್ರಮ ಕೈಗೊಂಡಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here