ಮಂಗಳೂರು: ಸ್ವಂತ ಸಹೋದರಿಯಿಂದಲೇ ಕೊಲೆಗೀಡಾದ ಕಾರ್ತಿಕ್ ರಾಜ್ ಮನೆಗೆ ಗೃಹಸಚಿವ ಪರಮೇಶ್ವರ್ ಮಂಗಳವಾರ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಐವನ್ ಡಿಸೋಜಾ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ್ ಕರ್ಕೇರ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಪಜೀರು ಗ್ರಾಮ ಪಂಚಾಯತ್ ಅಧ್ಯಕ್ಷ ಸೀತರಾಮ ಶೆಟ್ಟಿ, ಉಮ್ಮರ್ ಪಜೀರು ಮೊದಲಾದವರು ಉಪಸ್ಥಿತರಿದ್ದರು.