Friday 9th, May 2025
canara news

ಕಾರು ಅಪಘಾತ -ವ್ಯಕ್ತಿ ಸಾವು

Published On : 06 May 2017   |  Reported By : Canaranews Network


ಮಂಗಳೂರು: ಸ್ವಿಫ್ಟ್ ಕಾರು ಅಪಘಾತಕ್ಕೀಡಾಗಿ ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರು ಪಡೀಲು ಸಮೀಪ ಶುಕ್ರವಾರ ನಸುಕಿನ ಜಾವ ಸಂಭವಿಸಿದೆ. ಮೃತರನ್ನು ಕಡಂಬಾರು ನಿವಾಸಿ ಯೂಸುಫ್(38) ಎಂದು ಗುರುತಿಸಲಾಗಿದೆ. ಜೊತೆಗಿದ್ದ ಮಚ್ಚಂಪಾಡಿ ನಿವಾಸಿ ಕಲೀಲ್ ಬಜಾಲ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೇ 7ರಂದು ಯೂಸುಫ್ ನ ಅಣ್ಣನ ಮಗಳ ಮದುವೆ ನಿಗದಿಯಾಗಿತ್ತು.

ಇದರಂತೆ ಸಕಲೇಶಪುರದ ಸಂಬಂಧಿಕರ ಮನೆಗೆ ಆಮಂತ್ರಣ ನೀಡಲು ಮನೆಯಿಂದ ತೆರಳಿದ್ದರು. ಮದುವೆ ಆಮಂತ್ರಣ ನೀಡಿ ಹಿಂತಿರುಗುತ್ತಿದ್ದಾಗ ಈ ಕಾರು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಿಂದ ಯೂಸುಫ್ ಗಂಭೀರವಾಗಿ ಗಾಯಗೊಂಡಿದ್ದು, ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಮೃತರು ಮಂಜೇಶ್ವರದಲ್ಲಿ ಉದ್ಯಮ ನಡೆಸುತ್ತಿದ್ದು, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here