Friday 26th, April 2024
canara news

ಪೋಷಕರ ನಿರ್ಲಕ್ಷ್ಯ, ಕಾರಿನಲ್ಲಿ ಮಗು ಉಸಿರುಗಟ್ಟಿ ಸಾವು

Published On : 06 May 2017   |  Reported By : Canaranews Network


ಮಂಗಳೂರು : ತಾಯಿ ಜೊತೆ ಅಜ್ಜಿ ಮನೆಗೆ ಬಂದ ಮಗುವೊಂದು ಕಾರಿನಲ್ಲೇ ಬಾಕಿಯಾಗಿ ಉಸಿರುಗಟ್ಟಿ ಸಾವನ್ನಪ್ಪಿದ ದುರ್ಘಟನೆ ದ.ಕ.ಜಿಲ್ಲೆಯ ಪುತ್ತೂರಿನ ಹೊರವಲಯದ ಹಾರಾಡಿಯಲ್ಲಿ ನಡೆದಿದೆ. ಉಳ್ಳಾಲದ ಇಮ್ರಾನ್ ಎಂಬವರ ಪುತ್ರಿ ರಹಮತ್ (3) ಮೃತಪಟ್ಟ ಮಗು. ಇಮ್ರಾನ್ ವಿದೇಶದಲ್ಲಿದ್ದು ಪುತ್ತೂರಿನ ಹಾರಾಡಿಯ ಸಂಶೀರ ಎಂಬವರನ್ನು ಮದುವೆಯಾಗಿದ್ದರು. ಎರಡನೇ ಹೆರಿಗೆಯಾಗಿ 20 ದಿನಗಳು ಕಳೆದಿದ್ದು ಬುಧವಾರ ಸಂಜೆ ತಾಯಿ ಮನೆಗೆ ಬಂದಿದ್ದರು.

ಹಾರಾಡಿಗೆ ಬಂದ ಇಮ್ರಾನ್ ಕುಟುಂಬಸ್ಥರು ಎಲ್ಲರೂ ಕಾರಿನಿಂದ ಇಳಿದಿದ್ದರು. ಆದರೆ ಮಗುವನ್ನು ಕಾರಿನಲ್ಲೇ ಬಿಟ್ಟಿದ್ದರು.ಸ್ವಲ್ಪ ಹೊತ್ತಿನ ಬಳಿಕ ಮಗಳು ಕಾಣತ್ತಿಲ್ಲ ಎಂದು ತಾಯಿ ಹುಡುಕಾಡಿದ್ದಾರೆ. ಆ ವೇಳೆ ಕಾರಿನಲ್ಲಿ ಮಗು ಕೂತ ಸ್ಥಿತಿಯಲ್ಲೇ ಮಲಗಿತ್ತು. ಎಬ್ಬಿಸುವ ವೇಳೆ ಮಗು ಮಾತನಾಡುತ್ತಿರಲಿಲ್ಲ. ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಆ ವೇಳೆ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here