Friday 9th, May 2025
canara news

ಪ್ರಕಾಶ್ ಪೂಜಾರಿ ಕೊಲೆ ಯತ್ನ: ಅಹ್ಮದ್ ಖುರೇಶಿಗೆ ಜಾಮೀನು

Published On : 07 May 2017   |  Reported By : Canaranews Network


ಮಂಗಳೂರು : 2016 ಫೆಬ್ರವರಿ 21ರಂದು ನಡೆದ ಪ್ರಕಾಶ್ ಪೂಜಾರಿ ಕೊಲೆ ಯತ್ನ ಪ್ರಕರಣದ ಪ್ರಮುಖ ಆರೋಪಿ ಅಹ್ಮದ್ ಖುರೇಶಿಗೆ ಶನಿವಾರ ಮಂಗಳೂರಿನ 6ನೇ ಹೆಚ್ಚುವರಿ ಸೆಷನ್ ನ್ಯಾಯಾಲಯವು ಜಾಮೀನು ನೀಡಿದೆ. ತಿಂಗಳಿಗೆ ಮೂರು ಬಾರಿ ಸ್ಥಳೀಯ ಠಾಣೆಗೆ ಹಾಜರಾಗಿ ತನಿಖೆಗೆ ಸಹಕಾರ ನೀಡಬೇಕು,

ಒಂದು ಲಕ್ಷ ರು. ಬಾಂಡ್ ಮಾಡಬೇಕು ಎಂಬ ಷರತ್ತಿನೊಂದಿಗೆ ನ್ಯಾಯಾಧೀಶ ಪುಟ್ಟರಂಗ ಸ್ವಾಮಿ ಜಾಮೀನು ಮಂಜೂರು ಮಾಡಿದ್ದಾರೆ. ನ್ಯಾಯಾಲಯದ ಆದೇಶದಂತೆ ಖುರೇಶಿ 1, 10 ಮತ್ತು 20ನೇ ತಾರೀಖಿಗೆ ಸ್ಥಳೀಯ ಪೊಲೀಸ್ ಠಾಣೆಗೆ ಹಾಜರಾಗಬೇಕು. ಅಲ್ಲದೆ, ಪಾಸ್ಪೋರ್ಟ್ ಹೊಂದಿದ್ದರೆ ಅದನ್ನು ಠಾಣೆಗೆ ಒಪ್ಪಿಸಬೇಕೆಂದು ನ್ಯಾಯಾಧೀಶರು ಆದೇಶ ನೀಡಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here