Thursday 25th, April 2024
canara news

ರಾಜ್ಯ ಸರಕಾರವನ್ನು ದೂಷಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಸುದರ್ಶನ್‌

Published On : 10 May 2017   |  Reported By : Canaranews Network


ಮಂಗಳೂರು: ರಾಜ್ಯದಲ್ಲಿ ದಕ್ಷ ಹಾಗೂ ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್‌ ಸರಕಾರವನ್ನು ದೂಷಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ. ಬಿಜೆಪಿ ಸರಕಾರದ ಭ್ರಷ್ಟಾಚಾರ, ಹಗರಣಗಳನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್‌ ಜಿಲ್ಲಾ ಉಸ್ತುವಾರಿ ವಿ.ಆರ್‌. ಸುದರ್ಶನ್‌ ಹೇಳಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ರಾಜ್ಯ ಸರಕಾರವನ್ನು ಭ್ರಷ್ಟ ಸರಕಾರ ಎಂದು ನಿರ್ಣಯ ಮಾಡಿದ್ದಾರೆ. ಆ ಹಕ್ಕು ಬಿಜೆಪಿ ನಾಯಕರಿಗಿಲ್ಲ. ಮುಖ್ಯವಾಗಿ ಬಿ.ಎಸ್‌. ಯಡಿಯೂರಪ್ಪನವರೇ ಭ್ರಷ್ಟಾಚಾರದಲ್ಲಿ ತೊಡಗಿದ್ದು, ಅದರ ಕಾನೂನು ಪ್ರಕ್ರಿಯೆಗಳು ಈಗಲೂ ನಡೆಯುತ್ತಿವೆ ಎಂದರು. ಹಿಂದಿನ ಸರಕಾರದ ಮೂವರು ಮುಖ್ಯಮಂತ್ರಿಗಳನ್ನು ನೆನಪಿಸಿಕೊಂಡಾಗ ಜನತೆ ಈಗಲೂ ಬೆಚ್ಚಿ ಬೀಳುತ್ತಾರೆ. ಉತ್ತಮ ವಿಪಕ್ಷವಾಗಿ ಕಾರ್ಯನಿರ್ವಹಿಸುವಲ್ಲಿಯೂ ಬಿಜೆಪಿ ವಿಫಲವಾಗಿದೆ ಎಂದು ಆರೋಪಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here