ಮಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸದ್ಯಕ್ಕೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಈ ಬಗ್ಗೆ ಹೈಕಮಾಂಡ್ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರ್.
ಮಂಗಳೂರಿನಲ್ಲಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರ ಬಳಿ ಪಕ್ಷದ ಕೆಲವು ಮುಖಂಡರು ನನ್ನ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ವಿರುದ್ಧ ದೂರು ನೀಡಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ವಿಚಾರ.
ಇವೆಲ್ಲಾ ಮಾಧ್ಯಮಗಳ ಸೃಷ್ಠಿ. ಪಕ್ಷದ ನಾಯಕತ್ವ ಅಥವಾ ಅಧ್ಯಕ್ಷರ ವಿರುದ್ಧ ಯಾರೂ ದೂರು ನೀಡಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.