ಮಂಗಳೂರು: ದ.ಕ.ಜಿಲ್ಲೆಯ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಭಂಗವನ್ನುಂಟು ಮಾಡುತ್ತಿದ್ದ ಆರೋಪದಲ್ಲಿ ನಾಲ್ವರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಗರ ಹೊರವಲಯದ ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಮುದ್ದೋಡಿ ನಿವಾಸಿ ಯುಸೂಫ್ ಜುನೈದ್, ನರಿಮೊಗ್ರು ಗ್ರಾಮದ ಮುಕ್ವೆ ನಿವಾಸಿ ಅಬ್ದುಲ್ ಬಶೀರ್, ಬನ್ನೂರು ಗ್ರಾಮದ ಕರ್ಮಲ ನಿವಾಸಿ ನಝೀರ್ ನೆಹರೂ ನಗರದ ನಿವಾಸಿ ಧನು ಯಾನೆ ಧನಂಜಯ ಎಂಬವರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಆರೋಪಿಗಳು ಬೇರೆ ಬೇರೆ ವಿಚಾರಕ್ಕೆ ಸಂಬಂಧಿಸಿ ಪದೇ ಪದೇ ತಕರಾರು ಎತ್ತಿ ಸಾರ್ವಜನಿಕ ಭಂಗವನ್ನುಂಟು ಮಾಡುತ್ತಿದ್ದ ಆರೋಪದಲ್ಲಿ ಅವರ ವಿರುದ್ಧ ಸೆಕ್ಷನ್ ೧೦೭ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.