Friday 9th, May 2025
canara news

ಮಂಗಳೂರುನಿಂದ ಕೊಲ್ಲೂರಿಗೆ ವೋಲ್ವೋ ಬಸ್: ಗೋಪಾಲ ಪೂಜಾರಿ

Published On : 12 May 2017   |  Reported By : Canaranews Network


ಮಂಗಳೂರು: ಭಕ್ತರ ಅನುಕೂಲದ ದೃಷ್ಟಿಯಿಂದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಶ್ರೀ ಕ್ಷೇತ್ರ ಕೊಲ್ಲೂರಿಗೆ ಪ್ರತಿನಿತ್ಯ ಕೆಎಸ್ಆರ್ಟಿಸಿ ವೋಲ್ವೋ ಸಾರಿಗೆ ಸೌಲಭ್ಯ ಕಲ್ಪಿಸಲು ವ್ಯವಸ್ಥೆ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗೆ ಸೂಚಿಸಿದ್ದಾರೆ.

ಕೊಲ್ಲೂರು ಕ್ಷೇತ್ರದ ಟ್ರಸ್ಟಿ ಅಭಿಲಾಷ್ ಪಿ.ವಿ. ಅವರು ಗೋಪಾಲ ಪೂಜಾರಿ ಅವರಿಗೆ ಇತ್ತೀಚೆಗೆ ಮನವಿ ಸಲ್ಲಿಸಿ, ಭಕ್ತರ ಅನುಕೂಲಕ್ಕಾಗಿ ಮಂಗಳೂರು ಸೆಂಟ್ರಲ್ನಿಂದ ಬಸ್ ವ್ಯವಸ್ಥೆ ಆರಂಭಿಸುವಂತೆ ಕೋರಿದ್ದರು.ಮನವಿಯ ಹಿನ್ನೆಲೆಯಲ್ಲಿ, ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಶ್ರೀ ಕ್ಷೇತ್ರ ಕೊಲ್ಲೂರಿಗೆ ಪ್ರತಿನಿತ್ಯ ಬೆಳಗ್ಗೆ 8.30, 8.50, 10 ಗಂಟೆ ಹಾಗೂ ಮಧ್ಯಾಹ್ನ 12.30ಕ್ಕೆ ವೋಲ್ವೋ ಸಾರಿಗೆ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗೆ ಪತ್ರದ ಮುಖಾಂತರ ಸೂಚಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here