Friday 26th, April 2024
canara news

ಚಾರ್ಮಾಡಿ ಘಾಟಿಯಲ್ಲಿ ಉರುಳಿದ ಬಸ್, 2 ಮಂದಿ ಸಾವು

Published On : 16 May 2017   |  Reported By : Canaranews Network


ಮಂಗಳೂರು: ಚಿಕ್ಕಮಗಳೂರು -ದಕ್ಷಿಣ ಕನ್ನಡ ಜಿಲ್ಲೆ ಗಡಿಭಾಗದ ಚಾರ್ಮಾಡಿ ಘಾಟ್ ನಲ್ಲಿ ಮಂಗಳವಾರ ಮಧ್ಯಾಹ್ನ ಕೇರಳ ನೋಂದಣಿ ಇರುವ ಖಾಸಗಿ ಬಸ್ ಕಂದಕಕ್ಕೆ ಉರುಳಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೂಡಿಗೆರೆ ಕಡೆಯಿಂದ ಚಾರ್ಮಾಡಿ ಮೂಲಕ ಹೋಗುತ್ತಿದ್ದ ಮಿನಿಬಸ್, ಚಾರ್ಮಾಡಿ ಘಾಟಿಯ 5ನೇ ತಿರುವಿನಲ್ಲಿ ಈ ಅಪಘಾತಕ್ಕೀಡಾಯಿತು. ಕೇರಳ ಮೂಲದ KL 16-2617 ನೋಂದಣಿ ಇರುವ ಖಾಸಗಿ ಬಸ್ಸೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ.ಬಸ್ಸಿನಲ್ಲಿ ಸುಮಾರು 40ಕ್ಕೂ ಅಧಿಕ ಪ್ರಯಾಣಿಕರಿದ್ದರು.

ಈ ದುರ್ಘಟನೆಯಿಂದಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಅನೇಕರಿಗೆ ಗಾಯಗಳಾಗಿವೆ.ಘಟನಾ ಸ್ಥಳಕ್ಕೆ ಬಣಕಲ್ ಮತ್ತು ಧರ್ಮಸ್ಥಳದ ಪೊಲೀಸರು ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಾಯಗೊಂಡವರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here